ಭೂಮಾಪನ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ನಿಯೋಜಿಸಿದ್ದ 200 ಅಧಿಕಾರಿಗಳಿಗೆ ಮಾತೃ ಇಲಾಖೆಗೆ ಮರಳುವಂತೆ ನಿರ್ದೇಶಿಸಿ ಸರ್ಕಾರ ಆದೇಶ ಹೊರಡಿಸಿರುವುದು ಇದನ್ನು ಪುಷ್ಟೀಕರಿಸಿದೆ. ಕೇಂದ್ರ ಸರ್ಕಾರದ ಒಪ್ಪಿಗೆ ಪಡೆದ ನಂತರ ಯೋಜನೆ ಕುರಿತ ಮುಂದಿನ ತೀರ್ಮಾನಗಳನ್ನು ತಿಳಿಸಲಾಗುವುದು ಎಂದೂ ಆದೇಶದಲ್ಲಿ ಹೇಳಲಾಗಿದೆ.