<p><strong>ತಿರುವನಂತಪುರ:</strong> ಕೇರಳದಲ್ಲಿ ಇತ್ತೀಚೆಗೆ ಕೋವಿಡ್ ಮತ್ತು ಝೀಕಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಆತಂಕ ಮೂಡಿಸಿದೆ.</p>.<p>ಕಳೆದ ವರ್ಷ ಕೋವಿಡ್ ಪಿಡುಗನ್ನು ಸಮರ್ಪಕವಾಗಿ ಎದುರಿಸಿದ್ದ ಕೇರಳ ರಾಷ್ಟ್ರದಾದ್ಯಂತ ಪ್ರಶಂಸೆ ಗಿಟ್ಟಿಸಿತ್ತು. ‘ಕೇರಳ ಮಾದರಿ’ ಅಳವಡಿಕೆ ಕುರಿತು ಚರ್ಚೆಗಳು ಆಗಿದ್ದವು.</p>.<p>ಆದರೆ, ಇದೀಗ ಕೇರಳದಲ್ಲಿ ನಿತ್ಯ ಹೊಸದಾಗಿ 12,000ದಿಂದ 15,000 ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಆರೋಗ್ಯ ಅಧಿಕಾರಿಗಳ ಕಳವಳಕ್ಕೆ ಕಾರಣವಾಗಿದೆ.</p>.<p>ಕೇರಳದಲ್ಲಿ ಶನಿವಾರ ಕೋವಿಡ್ನ 14,087 ಹೊಸ ಪ್ರಕರಣಗಳು ವರದಿಯಾಗಿದ್ದು, 109 ಜನರು ಅಸುನೀಗಿದ್ದಾರೆ. ಇದರಿಂದ ಇಲ್ಲಿಯವರೆಗೂ ರಾಜ್ಯದಲ್ಲಿ 30.39 ಲಕ್ಷ ಜನರಲ್ಲಿ ಕೋವಿಡ್ ಕಾಣಿಸಿಕೊಂಡಿದ್ದರೆ, 14,380 ಜನರು ಮೃತಪಟ್ಟಂತಾಗಿದೆ.</p>.<p>ಅನ್ಲಾಕ್ನಿಂದಾಗಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತದೆ ಎಂಬ ನಿರೀಕ್ಷೆಯಿದೆ ಎಂದು ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ.</p>.<p class="bodytext">ಇದರ ನಡುವೆ ರಾಜ್ಯದಲ್ಲಿ 14 ಝೀಕಾ ವೈರಸ್ ಪ್ರಕರಣಗಳು ವರದಿಯಾಗಿವೆ. ಈ ಸಮಯದಲ್ಲಿ ಪರಿಸ್ಥಿತಿ ನಿಭಾಯಿಸಲು ಅಗತ್ಯ ಸಲಹೆಯನ್ನು ರಾಜ್ಯ ಸರ್ಕಾರಕ್ಕೆ ನೀಡಲು ಕೇಂದ್ರದ ತಂಡ ಬರಲಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳದಲ್ಲಿ ಇತ್ತೀಚೆಗೆ ಕೋವಿಡ್ ಮತ್ತು ಝೀಕಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಆತಂಕ ಮೂಡಿಸಿದೆ.</p>.<p>ಕಳೆದ ವರ್ಷ ಕೋವಿಡ್ ಪಿಡುಗನ್ನು ಸಮರ್ಪಕವಾಗಿ ಎದುರಿಸಿದ್ದ ಕೇರಳ ರಾಷ್ಟ್ರದಾದ್ಯಂತ ಪ್ರಶಂಸೆ ಗಿಟ್ಟಿಸಿತ್ತು. ‘ಕೇರಳ ಮಾದರಿ’ ಅಳವಡಿಕೆ ಕುರಿತು ಚರ್ಚೆಗಳು ಆಗಿದ್ದವು.</p>.<p>ಆದರೆ, ಇದೀಗ ಕೇರಳದಲ್ಲಿ ನಿತ್ಯ ಹೊಸದಾಗಿ 12,000ದಿಂದ 15,000 ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಆರೋಗ್ಯ ಅಧಿಕಾರಿಗಳ ಕಳವಳಕ್ಕೆ ಕಾರಣವಾಗಿದೆ.</p>.<p>ಕೇರಳದಲ್ಲಿ ಶನಿವಾರ ಕೋವಿಡ್ನ 14,087 ಹೊಸ ಪ್ರಕರಣಗಳು ವರದಿಯಾಗಿದ್ದು, 109 ಜನರು ಅಸುನೀಗಿದ್ದಾರೆ. ಇದರಿಂದ ಇಲ್ಲಿಯವರೆಗೂ ರಾಜ್ಯದಲ್ಲಿ 30.39 ಲಕ್ಷ ಜನರಲ್ಲಿ ಕೋವಿಡ್ ಕಾಣಿಸಿಕೊಂಡಿದ್ದರೆ, 14,380 ಜನರು ಮೃತಪಟ್ಟಂತಾಗಿದೆ.</p>.<p>ಅನ್ಲಾಕ್ನಿಂದಾಗಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತದೆ ಎಂಬ ನಿರೀಕ್ಷೆಯಿದೆ ಎಂದು ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ.</p>.<p class="bodytext">ಇದರ ನಡುವೆ ರಾಜ್ಯದಲ್ಲಿ 14 ಝೀಕಾ ವೈರಸ್ ಪ್ರಕರಣಗಳು ವರದಿಯಾಗಿವೆ. ಈ ಸಮಯದಲ್ಲಿ ಪರಿಸ್ಥಿತಿ ನಿಭಾಯಿಸಲು ಅಗತ್ಯ ಸಲಹೆಯನ್ನು ರಾಜ್ಯ ಸರ್ಕಾರಕ್ಕೆ ನೀಡಲು ಕೇಂದ್ರದ ತಂಡ ಬರಲಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>