ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ‘ಬಲಿ ತರ್ಪಣಂ’ ಆಚರಣೆ ಇಲ್ಲ– ಟಿಡಿಬಿ

Last Updated 24 ಜುಲೈ 2021, 10:06 IST
ಅಕ್ಷರ ಗಾತ್ರ

ತಿರುವನಂತಪುರ: ಕೋವಿಡ್‌ ಕಾರಣದಿಂದಾಗಿ, ತನ್ನ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ಈ ವರ್ಷ ‘ಬಲಿ ತರ್ಪಣಂ’ ಆಚರಿಸದಿರಲು ಕೇರಳದ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ನಿರ್ಧರಿಸಿದೆ.

ಇತ್ತೀಚಿಗೆ ನಡೆದ ಮಂಡಳಿಯ ಉನ್ನತ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಪ್ರತಿವರ್ಷ ಕೇರಳದ ದೇವಸ್ಥಾನಗಳ ಆವರಣದಲ್ಲಿ ಸಾವಿರಾರು ಭಕ್ತರು ಪೂರ್ವಜರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ‘ಬಲಿ ತರ್ಪಣಂ’ ವಿಧಿಯನ್ನು ನೆರವೇರಿಸುತ್ತಾರೆ.

ಹಿಂದೂ ಸಮುದಾಯದವರು ‘ಕರ್ಕಿಡಕ ವಾವು’ ನಿಮಿತ್ತ ಸಮುದ್ರ ಮತ್ತು ನದಿ ತೀರದಲ್ಲೂ ಈ ಧಾರ್ಮಿಕ ವಿಧಿಯನ್ನು ನೆರವೇರಿಸುತ್ತಾರೆ. ಈ ದಿನದಂದು ‘ಬಲಿ ತರ್ಪಣಂ’ ಸಮರ್ಪಿಸಿದರೆ, ಪೂರ್ವಜರ ಆತ್ಮಕ್ಕೆ ಶಾಂತಿ ಸಿಗಲಿದೆ ಎಂಬ ನಂಬಿಕೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT