<p><strong>ತಿರುವನಂತಪುರ: </strong>ರಾಜ್ಯದ ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದುಹಾಕಲು ಅನುಕೂಲವಾಗುವಂತೆ ವಿ.ವಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ಕೇರಳ ಸರ್ಕಾರ ಬುಧವಾರ ನಿರ್ಧರಿಸಿದೆ.</p>.<p>ಅಲ್ಲದೇ, ಶೈಕ್ಷಣಿಕ ಕ್ಷೇತ್ರದ ತಜ್ಞರನ್ನು ಕುಲಾಧಿಪತಿಗಳ ಹುದ್ದೆಗೆ ನೇಮಕ ಮಾಡುವುದು ಸಹ ಈ ತಿದ್ದುಪಡಿಯ ಉದ್ದೇಶವಾಗಿದೆ. ಈ ಸಂಬಂಧ ಸುಗ್ರೀವಾಜ್ಞೆಯನ್ನು ಹೊರಡಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.</p>.<p>ಈ ನಿರ್ಧಾರ ಕುರಿತು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ಬಿಡುಗಡೆ ಮಾಡಿದೆ. ‘ರಾಜ್ಯಪಾಲರು ಸಾಂವಿಧಾನಿಕ ಕರ್ತವ್ಯಗಳನ್ನು ನಿಭಾಯಿಸಬೇಕು. ಹೀಗಾಗಿ ಅವರನ್ನು ವಿಶ್ವವಿದ್ಯಾಲಯಗಳ ಕುಲಾಧಿಪತಿಗಳನ್ನಾಗಿ ನೇಮಕ ಮಾಡುವುದು ಸಮಂಜಸವಲ್ಲ ಎಂಬ ಪುಂಛಿ ಆಯೋಗದ ಶಿಫಾರಸಿನಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.</p>.<p>ಇದರೊಂದಿಗೆ ರಾಜ್ಯಪಾಲ ಹಾಗೂ ಸರ್ಕಾರದ ನಡುವಿನ ಸಂಘರ್ಷ ಹೊಸ ಘಟ್ಟ ತಲುಪಿದಂತಾಗಿದೆ. ಇನ್ನೊಂದೆಡೆ, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ನಡೆ ಏನಾಗಿರಲಿದೆ ಎಂಬುದು ಮುಖ್ಯವಾಗಲಿದೆ.</p>.<p>ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ಬದಲಿಸುವುದಕ್ಕೆ ಸಂಬಂಧಿಸಿ, ವಿ.ವಿ.ಗಳ ಕಾಯ್ದೆಗೆ ತಿದ್ದುಪಡಿ ತಂದ ಮಸೂದೆಗಳಿಗೆ ಎರಡು ತಿಂಗಳಾದರೂ ರಾಜ್ಯಪಾಲ ಖಾನ್ ಅವರು ಅಂಕಿತ ಹಾಕಿಲ್ಲ ಎಂಬುದು ಗಮನಾರ್ಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ: </strong>ರಾಜ್ಯದ ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದುಹಾಕಲು ಅನುಕೂಲವಾಗುವಂತೆ ವಿ.ವಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ಕೇರಳ ಸರ್ಕಾರ ಬುಧವಾರ ನಿರ್ಧರಿಸಿದೆ.</p>.<p>ಅಲ್ಲದೇ, ಶೈಕ್ಷಣಿಕ ಕ್ಷೇತ್ರದ ತಜ್ಞರನ್ನು ಕುಲಾಧಿಪತಿಗಳ ಹುದ್ದೆಗೆ ನೇಮಕ ಮಾಡುವುದು ಸಹ ಈ ತಿದ್ದುಪಡಿಯ ಉದ್ದೇಶವಾಗಿದೆ. ಈ ಸಂಬಂಧ ಸುಗ್ರೀವಾಜ್ಞೆಯನ್ನು ಹೊರಡಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.</p>.<p>ಈ ನಿರ್ಧಾರ ಕುರಿತು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ಬಿಡುಗಡೆ ಮಾಡಿದೆ. ‘ರಾಜ್ಯಪಾಲರು ಸಾಂವಿಧಾನಿಕ ಕರ್ತವ್ಯಗಳನ್ನು ನಿಭಾಯಿಸಬೇಕು. ಹೀಗಾಗಿ ಅವರನ್ನು ವಿಶ್ವವಿದ್ಯಾಲಯಗಳ ಕುಲಾಧಿಪತಿಗಳನ್ನಾಗಿ ನೇಮಕ ಮಾಡುವುದು ಸಮಂಜಸವಲ್ಲ ಎಂಬ ಪುಂಛಿ ಆಯೋಗದ ಶಿಫಾರಸಿನಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.</p>.<p>ಇದರೊಂದಿಗೆ ರಾಜ್ಯಪಾಲ ಹಾಗೂ ಸರ್ಕಾರದ ನಡುವಿನ ಸಂಘರ್ಷ ಹೊಸ ಘಟ್ಟ ತಲುಪಿದಂತಾಗಿದೆ. ಇನ್ನೊಂದೆಡೆ, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ನಡೆ ಏನಾಗಿರಲಿದೆ ಎಂಬುದು ಮುಖ್ಯವಾಗಲಿದೆ.</p>.<p>ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ಬದಲಿಸುವುದಕ್ಕೆ ಸಂಬಂಧಿಸಿ, ವಿ.ವಿ.ಗಳ ಕಾಯ್ದೆಗೆ ತಿದ್ದುಪಡಿ ತಂದ ಮಸೂದೆಗಳಿಗೆ ಎರಡು ತಿಂಗಳಾದರೂ ರಾಜ್ಯಪಾಲ ಖಾನ್ ಅವರು ಅಂಕಿತ ಹಾಕಿಲ್ಲ ಎಂಬುದು ಗಮನಾರ್ಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>