<p class="title"><strong>ಪಾಲಕ್ಕಾಡ್</strong>, <strong>ಕೇರಳ</strong>: ‘ಸಾಕು ನಾಯಿಗೆ ಆಹಾರ ನೀಡಲು ವಿಳಂಬ ಮಾಡಿದ ಕಾರಣಕ್ಕೆ ತನ್ನ ಸೋದರ ಸಂಬಂಧಿಯನ್ನು ಥಳಿಸಿ ಹತ್ಯೆ ಮಾಡಿದ್ದಾನೆಂದು ಹೇಳಲಾದ ಹಕೀಂ (27) ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p class="title">ಅರ್ಷದ್ (21) ಎಂಬಾತ ಮೃತ ವ್ಯಕ್ತಿ. ಈ ಘಟನೆ ಗುರುವಾರ ರಾತ್ರಿ ನಡೆದಿದೆ.</p>.<p class="title">‘ಗಾಯಾಳು ಮೃತಪಟ್ಟ ಘಟನೆಯ ಬಗ್ಗೆ ಆಸ್ಪತ್ರೆಯೊಂದರ ವೈದ್ಯರು ನಮಗೆ ಮಾಹಿತಿ ನೀಡಿದರು. ಹಕೀಂನನ್ನು ಶನಿವಾರ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹಕೀಂ, ಅರ್ಷದ್ ಮೇಲೆ ಸಾಂದರ್ಭಿಕವಾಗಿ ಹಲ್ಲೆ ನಡೆಸಿದಾಗ ಈ ಘಟನೆ ನಡೆದಿರುವುದಾಗಿಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ’ ಎಂದೂ ಪೊಲೀಸರು ಹೇಳಿದರು.</p>.<p class="title">‘ಹಕೀಂ ಇಲ್ಲಿ (ಪಾಲಕ್ಕಾಡ್) ವ್ಯಾಪಾರವನ್ನು ಮಾಡುತ್ತಿದ್ದ. ಆತನೊಂದಿಗೆ ಅರ್ಷದ್ ಕೂಡ ಕೆಲಸ ಮಾಡುತ್ತಿದ್ದ. ಇಬ್ಬರೂ ಒಟ್ಟಿಗೆ ಇರುತ್ತಿದ್ದರು.ಈ ಹಿಂದೆಯೂ ಹಕೀಂ, ಅರ್ಷದ್ನನ್ನು ಥಳಿಸಿರುವುದು ಗೊತ್ತಾಗಿದೆ. ಆದರೆ, ಈ ಬಾರಿನಾಯಿಯ ಬೆಲ್ಟ್ ಮತ್ತು ದೊಣ್ಣೆಯಿಂದ ಮಾರಣಾಂತಿಕವಾಗಿ ಥಳಿಸಿದ್ದಾನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಪಾಲಕ್ಕಾಡ್</strong>, <strong>ಕೇರಳ</strong>: ‘ಸಾಕು ನಾಯಿಗೆ ಆಹಾರ ನೀಡಲು ವಿಳಂಬ ಮಾಡಿದ ಕಾರಣಕ್ಕೆ ತನ್ನ ಸೋದರ ಸಂಬಂಧಿಯನ್ನು ಥಳಿಸಿ ಹತ್ಯೆ ಮಾಡಿದ್ದಾನೆಂದು ಹೇಳಲಾದ ಹಕೀಂ (27) ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p class="title">ಅರ್ಷದ್ (21) ಎಂಬಾತ ಮೃತ ವ್ಯಕ್ತಿ. ಈ ಘಟನೆ ಗುರುವಾರ ರಾತ್ರಿ ನಡೆದಿದೆ.</p>.<p class="title">‘ಗಾಯಾಳು ಮೃತಪಟ್ಟ ಘಟನೆಯ ಬಗ್ಗೆ ಆಸ್ಪತ್ರೆಯೊಂದರ ವೈದ್ಯರು ನಮಗೆ ಮಾಹಿತಿ ನೀಡಿದರು. ಹಕೀಂನನ್ನು ಶನಿವಾರ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹಕೀಂ, ಅರ್ಷದ್ ಮೇಲೆ ಸಾಂದರ್ಭಿಕವಾಗಿ ಹಲ್ಲೆ ನಡೆಸಿದಾಗ ಈ ಘಟನೆ ನಡೆದಿರುವುದಾಗಿಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ’ ಎಂದೂ ಪೊಲೀಸರು ಹೇಳಿದರು.</p>.<p class="title">‘ಹಕೀಂ ಇಲ್ಲಿ (ಪಾಲಕ್ಕಾಡ್) ವ್ಯಾಪಾರವನ್ನು ಮಾಡುತ್ತಿದ್ದ. ಆತನೊಂದಿಗೆ ಅರ್ಷದ್ ಕೂಡ ಕೆಲಸ ಮಾಡುತ್ತಿದ್ದ. ಇಬ್ಬರೂ ಒಟ್ಟಿಗೆ ಇರುತ್ತಿದ್ದರು.ಈ ಹಿಂದೆಯೂ ಹಕೀಂ, ಅರ್ಷದ್ನನ್ನು ಥಳಿಸಿರುವುದು ಗೊತ್ತಾಗಿದೆ. ಆದರೆ, ಈ ಬಾರಿನಾಯಿಯ ಬೆಲ್ಟ್ ಮತ್ತು ದೊಣ್ಣೆಯಿಂದ ಮಾರಣಾಂತಿಕವಾಗಿ ಥಳಿಸಿದ್ದಾನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>