<p><strong>ಕೊಚ್ಚಿ:</strong> ಕೇರಳದ ಕೊಚ್ಚಿಯಲ್ಲಿ ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಅವರ ಕಟೌಟ್ಗೆ ಕಪ್ಪು ಆಯಿಲ್ ಸುರಿದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.</p>.<p>ಕೊಚ್ಚಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಸಚಿನ್ ಕಟೌಟ್ಗೆ ಕಪ್ಪು ಆಯಿಲ್ ಸುರಿದು ಪ್ರತಿಭಟನೆ ನಡೆಸಿದರು.</p>.<p>ಮೈಕ್ರೋ ಬ್ಲಾಗಿಂಗ್ ಟ್ವಿಟರ್ನಲ್ಲಿ ಭಾರತದಲ್ಲಿ ರೈತರ ಪ್ರತಿಭಟನೆಗೆ ಅಂತರ ರಾಷ್ಟ್ರೀಯ ವ್ಯಕ್ತಿಗಳು ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದರು.</p>.<p>ಜಾಗತಿಕ ಸೆಲೆಬ್ರಿಟಿಗಳ ಅಭಿಪ್ರಾಯಗಳ ಬಗ್ಗೆ ಟ್ವೀಟ್ ಮಾಡಿದ್ದ ಸಚಿನ್, ಭಾರತದ ಸಾರ್ವಭೌಮತ್ವವನ್ನು ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಮತ್ತು ಬಾಹ್ಯ ಶಕ್ತಿಗಳು ದೇಶದ ಆಂತರಿಕ ವಿಷದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಹೇಳಿದ್ದರು. ಇದು ಪರೋಕ್ಷವಾಗಿ ಕೇಂದ್ರ ಸರ್ಕಾರವನ್ನು ಬೆಂಬಲ ಸೂಚಿಸುವಂತಾಗಿತ್ತು.</p>.<p>ಇದನ್ನೂ ಓದಿ:<a href="https://www.prajavani.net/india-news/upset-with-tendulkar-malayalee-netizens-regrets-sharapova-802543.html" itemprop="url">ಸಚಿನ್ ಟ್ವೀಟ್ ಬಗ್ಗೆ ಅಸಮಾಧಾನ; ಶರಪೋವಾ ಕ್ಷಮೆಯಾಚಿಸಿದ ಕೇರಳದ ನೆಟ್ಟಿಗರು </a></p>.<p>ಸಚಿನ್ ಟ್ವೀಟ್ ಬಗ್ಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ.</p>.<p>ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ರೈತರು ಕಳೆದ 70ಕ್ಕಿಂತಲೂ ಹೆಚ್ಚು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಕೇರಳದ ಕೊಚ್ಚಿಯಲ್ಲಿ ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಅವರ ಕಟೌಟ್ಗೆ ಕಪ್ಪು ಆಯಿಲ್ ಸುರಿದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.</p>.<p>ಕೊಚ್ಚಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಸಚಿನ್ ಕಟೌಟ್ಗೆ ಕಪ್ಪು ಆಯಿಲ್ ಸುರಿದು ಪ್ರತಿಭಟನೆ ನಡೆಸಿದರು.</p>.<p>ಮೈಕ್ರೋ ಬ್ಲಾಗಿಂಗ್ ಟ್ವಿಟರ್ನಲ್ಲಿ ಭಾರತದಲ್ಲಿ ರೈತರ ಪ್ರತಿಭಟನೆಗೆ ಅಂತರ ರಾಷ್ಟ್ರೀಯ ವ್ಯಕ್ತಿಗಳು ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದರು.</p>.<p>ಜಾಗತಿಕ ಸೆಲೆಬ್ರಿಟಿಗಳ ಅಭಿಪ್ರಾಯಗಳ ಬಗ್ಗೆ ಟ್ವೀಟ್ ಮಾಡಿದ್ದ ಸಚಿನ್, ಭಾರತದ ಸಾರ್ವಭೌಮತ್ವವನ್ನು ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಮತ್ತು ಬಾಹ್ಯ ಶಕ್ತಿಗಳು ದೇಶದ ಆಂತರಿಕ ವಿಷದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಹೇಳಿದ್ದರು. ಇದು ಪರೋಕ್ಷವಾಗಿ ಕೇಂದ್ರ ಸರ್ಕಾರವನ್ನು ಬೆಂಬಲ ಸೂಚಿಸುವಂತಾಗಿತ್ತು.</p>.<p>ಇದನ್ನೂ ಓದಿ:<a href="https://www.prajavani.net/india-news/upset-with-tendulkar-malayalee-netizens-regrets-sharapova-802543.html" itemprop="url">ಸಚಿನ್ ಟ್ವೀಟ್ ಬಗ್ಗೆ ಅಸಮಾಧಾನ; ಶರಪೋವಾ ಕ್ಷಮೆಯಾಚಿಸಿದ ಕೇರಳದ ನೆಟ್ಟಿಗರು </a></p>.<p>ಸಚಿನ್ ಟ್ವೀಟ್ ಬಗ್ಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ.</p>.<p>ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ರೈತರು ಕಳೆದ 70ಕ್ಕಿಂತಲೂ ಹೆಚ್ಚು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>