<p><strong>ನೊಯಿಡಾ/ಅಲೀಗಡ:</strong> ‘ಅಲೀಗಡ ಕಳ್ಳಬಟ್ಟಿ ಪ್ರಕರಣದ ಪ್ರಮುಖ ಆರೋಪಿಯನ್ನು ಭಾನುವಾರ ಮುಂಜಾನೆ ಬಂಧಿಸಲಾಗಿದೆ. ಕಳೆದ ತಿಂಗಳು ಸಂಭವಿಸಿದ ಈ ದುರಂತದಲ್ಲಿ 35 ಮಂದಿ ಮೃತಪಟ್ಟಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಉತ್ತರ ಪ್ರದೇಶದ ಬುಲಂದ್ಶಹರ್ ಗಡಿಯಲ್ಲಿ ಆರೋಪಿ ರಿಶಿ ಶರ್ಮಾನನ್ನು ಬಂಧಿಸಲಾಗಿದೆ. ಈತನ ತಲೆಗೆ ಸರ್ಕಾರವು ₹1 ಲಕ್ಷ ಬಹುಮಾನ ಘೋಷಿಸಿತ್ತು’ ಎಂದು ಅಲೀಗಡದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ(ಎಸ್ಎಸ್ಪಿ) ಕಲಾನಿಧಿ ನೈಥಾನಿ ಅವರು ಹೇಳಿದರು.</p>.<p>‘ಅಲೀಗಡದಲ್ಲಿ ಇತ್ತೀಚೆಗೆ ಎರಡು ವಿಭಿನ್ನ ಸಂದರ್ಭಗಳಲ್ಲಿ ಕಳ್ಳಬಟ್ಟಿ ಸೇವಿಸಿ, ಸುಮಾರು 50 ಮಂದಿ ಮೃತಪಟ್ಟಿದ್ದರು. ಇನ್ನೂ 50 ಮಂದಿಯ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಹಾಗಾಗಿ ಮೃತರ ಸಂಖ್ಯೆ 100ಕ್ಕೆ ತಲುಪುವ ಸಾಧ್ಯತೆಗಳಿವೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಈ ಹಿಂದೆ, ಆರೋಪಿಗಳಾದ ವಿಪಿನ್ ಶರ್ಮಾ ಮತ್ತು ರಿಷಿ ಶರ್ಮಾನ ಸಹೋದರ ಮನೀಶ್ ಶರ್ಮಾನನ್ನು ಪೊಲೀಸರು ಬಂಧಿಸಿದ್ದರು.</p>.<p>‘ಕಳ್ಳಬಟ್ಟಿ ದುರಂತಕ್ಕೆ ಸಂಬಂಧಿಸಿದಂತೆ ಈವರೆಗೆ ಅಲೀಗಡದಲ್ಲಿ 17 ಎಫ್ಐಆರ್ಗಳನ್ನು ದಾಖಲಿಸಲಾಗಿದ್ದು, 61 ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರು ರಾಜ್ಯಗಳಲ್ಲಿ ಪೊಲೀಸರ ತಂಡಗಳು ತನಿಖೆ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ’ ಎಂದು ಜಿಲ್ಲಾ ಪೊಲೀಸರ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೊಯಿಡಾ/ಅಲೀಗಡ:</strong> ‘ಅಲೀಗಡ ಕಳ್ಳಬಟ್ಟಿ ಪ್ರಕರಣದ ಪ್ರಮುಖ ಆರೋಪಿಯನ್ನು ಭಾನುವಾರ ಮುಂಜಾನೆ ಬಂಧಿಸಲಾಗಿದೆ. ಕಳೆದ ತಿಂಗಳು ಸಂಭವಿಸಿದ ಈ ದುರಂತದಲ್ಲಿ 35 ಮಂದಿ ಮೃತಪಟ್ಟಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಉತ್ತರ ಪ್ರದೇಶದ ಬುಲಂದ್ಶಹರ್ ಗಡಿಯಲ್ಲಿ ಆರೋಪಿ ರಿಶಿ ಶರ್ಮಾನನ್ನು ಬಂಧಿಸಲಾಗಿದೆ. ಈತನ ತಲೆಗೆ ಸರ್ಕಾರವು ₹1 ಲಕ್ಷ ಬಹುಮಾನ ಘೋಷಿಸಿತ್ತು’ ಎಂದು ಅಲೀಗಡದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ(ಎಸ್ಎಸ್ಪಿ) ಕಲಾನಿಧಿ ನೈಥಾನಿ ಅವರು ಹೇಳಿದರು.</p>.<p>‘ಅಲೀಗಡದಲ್ಲಿ ಇತ್ತೀಚೆಗೆ ಎರಡು ವಿಭಿನ್ನ ಸಂದರ್ಭಗಳಲ್ಲಿ ಕಳ್ಳಬಟ್ಟಿ ಸೇವಿಸಿ, ಸುಮಾರು 50 ಮಂದಿ ಮೃತಪಟ್ಟಿದ್ದರು. ಇನ್ನೂ 50 ಮಂದಿಯ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಹಾಗಾಗಿ ಮೃತರ ಸಂಖ್ಯೆ 100ಕ್ಕೆ ತಲುಪುವ ಸಾಧ್ಯತೆಗಳಿವೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಈ ಹಿಂದೆ, ಆರೋಪಿಗಳಾದ ವಿಪಿನ್ ಶರ್ಮಾ ಮತ್ತು ರಿಷಿ ಶರ್ಮಾನ ಸಹೋದರ ಮನೀಶ್ ಶರ್ಮಾನನ್ನು ಪೊಲೀಸರು ಬಂಧಿಸಿದ್ದರು.</p>.<p>‘ಕಳ್ಳಬಟ್ಟಿ ದುರಂತಕ್ಕೆ ಸಂಬಂಧಿಸಿದಂತೆ ಈವರೆಗೆ ಅಲೀಗಡದಲ್ಲಿ 17 ಎಫ್ಐಆರ್ಗಳನ್ನು ದಾಖಲಿಸಲಾಗಿದ್ದು, 61 ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರು ರಾಜ್ಯಗಳಲ್ಲಿ ಪೊಲೀಸರ ತಂಡಗಳು ತನಿಖೆ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ’ ಎಂದು ಜಿಲ್ಲಾ ಪೊಲೀಸರ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>