ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ ವಿಧಾನಸಭೆ ಮುಖ್ಯ ದ್ವಾರದ ಮೇಲೆ ಖಾಲಿಸ್ತಾನ ಧ್ವಜ: ತನಿಖೆಗೆ ಆದೇಶ

Last Updated 8 ಮೇ 2022, 6:57 IST
ಅಕ್ಷರ ಗಾತ್ರ

ಧರ್ಮಶಾಲಾ: ಡೆಹ್ರಾಡೂನ್‌ನಲ್ಲಿರುವ ಹಿಮಾಚಲ ಪ್ರದೇಶ ವಿಧಾನಸಭೆಯ ಮುಖ್ಯ ದ್ವಾರದ ಮೇಲೆ ಭಾನುವಾರ ಖಾಲಿಸ್ತಾನದ ಧ್ಜಜ ಅಂಟಿಸಲಾಗಿದೆ.

ಘಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಈ ಬಗ್ಗೆ ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ತಡರಾತ್ರಿ ಅಥವಾ ಮುಂಜಾನೆ ಈ ಕೃತ್ಯ ನಡೆದಿರುವ ಸಾಧ್ಯತೆಗಳಿವೆ. ಖಾಲಿಸ್ತಾನ ಧ್ವಜಗಳನ್ನು ತೆಗೆದಿದ್ದೇವೆ. ಪಂಜಾಬ್‌ನಿಂದ ಬಂದಿರಬಹುದಾದ ಪ್ರವಾಸಿಗರು ಈ ಕೆಲಸ ಮಾಡಿರಬಹುದು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಖುಶಾಲ್ ಶರ್ಮಾ ಹೇಳಿದ್ದಾರೆ.

‘ಖಾಲಿಸ್ತಾನ್ ಧ್ವಜವನ್ನು ಹಾರಿಸಿದ ಹೇಡಿತನದ ಘಟನೆಯನ್ನು ನಾನು ಖಂಡಿಸುತ್ತೇನೆ’ ಎಂದು ಸಿಎಂ ಠಾಕೂರ್‌ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT