‘ಸರ್ಕಾರವು ಮಸೂದೆಗಳಿಗೆ ಸುಲಭವಾಗಿ ಅನುಮೋದನೆ ಪಡೆಯಲು ಉದ್ದೇಶಿಸಿದೆ. ಹೀಗಾಗಿಯೇ, ಉದ್ದೇಶ ಪೂರ್ವಕವಾಗಿ ವಿರೋಧ ಪಕ್ಷಗಳ12 ಮಂದಿ ರಾಜ್ಯಸಭಾ ಸದಸ್ಯರನ್ನು ಅಮಾನತು ಮಾಡಲಾಗಿದೆ. ಸುಗಮ ಕಲಾಪದ ದೃಷ್ಟಿಯಿಂದ ಅಮಾನತು ಆದೇಶವನ್ನು ಹಿಂಪಡೆಯುವಂತೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೂ ಏನೂ ಪ್ರಯೋಜನವಾಗಿಲ್ಲ’ ಎಂದು ಖರ್ಗೆ ಹೇಳಿದ್ದಾರೆ.
ಮಂಗಳವಾರ ತೃಣಮೂಲ ಕಾಂಗ್ರೆಸ್ನ ರಾಜ್ಯಸಭಾ ಸದಸ್ಯ ಡೆರೆಕ್ ಓಬ್ರಿಯಾನ್ ಅವರನ್ನು ಅಮಾನತು ಮಾಡಲಾಗಿದ್ದು, ಈ ಮೂಲಕ ಅಮಾನತಾದ ವಿರೋಧ ಪಕ್ಷಗಳ ರಾಜ್ಯಸಭಾ ಸದಸ್ಯರ ಸಂಖ್ಯೆ 13ಕ್ಕೆ ಏರಿದೆ. ಅವರೂ ಸಹ ಇಂದು ಪ್ರತಿಭಟನಾನಿರತ ಅಮಾನತುಗೊಂಡಿರುವ ರಾಜ್ಯಸಭಾ ಸದಸ್ಯರನ್ನು ಸೇರಿಕೊಂಡಿದ್ದಾರೆ.