ನವದೆಹಲಿ: ‘ಸದನದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಪ್ರಧಾನಮಂತ್ರಿಯವರು ಸದನದಲ್ಲಿ ಯಾವಾಗ ಬೇಕಾದರೂ ಮಾತನಾಡಬಹುದು ಎಂದು ಸಭಾಪತಿ ಜಗದೀಪ್ ಧನಕರ್ ಅವರು ಆದೇಶ ನೀಡಿದ್ದರೂ ಕೂಡ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ’ ಎಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರತಿಭಟನೆಯನ್ನೂ ದಾಖಲಿಸಿದ್ದಾರೆ.