‘ಇದು ಸ್ನೇಹಯುತ ಸ್ಪರ್ಧೆಯಾಗಲಿದ್ದು, ನಾವು ಶತ್ರುಗಳಲ್ಲ. ಖರ್ಗೆ ಅವರಿಗೆ ಯಾವುದೇ ಅಗೌರವ ತೋರುತ್ತಿಲ್ಲ. ನನ್ನ ಚಿಂತನೆಗಳನ್ನು ಮುಂದಿಡುತ್ತಿದ್ದೇನೆ’ಎಂದು ತರೂರ್ ಹೇಳಿದರು.
ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ಕಾಂಗ್ರೆಸ್ನ 9,100ಕ್ಕೂ ಅಧಿಕ ಮಂದಿ ಮತದಾನ ಮಾಡಲು ಅರ್ಹರಾಗಿದ್ದಾರೆ. ಅಕ್ಟೋಬರ್ 17ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19ಕ್ಕೆ ಫಲಿತಾಂಶ ಹೊರಬೀಳಲಿದೆ.