<p><strong>ನವದೆಹಲಿ</strong>: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣಾ ಕಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ತಿರುವನಂತಪುರ ಸಂಸದ ಶಶಿ ತರೂರ್ ಮತ್ತು ಜಾರ್ಖಂಡ್ನ ಮಾಜಿ ಸಚಿವ ಕೆ.ಎನ್. ತ್ರಿಪಾಠಿ ಉಳಿದಿದ್ದಾರೆ.</p>.<p>ಹೈಕಮಾಂಡ್ನಿಂದ ಬೆಂಬಲ ಪಡೆದಿರುವ ಮಲ್ಲಿಕಾರ್ಜುನ ಖರ್ಗೆ ಗೆಲ್ಲುವ ಅಭ್ಯರ್ಥಿ ಎಂದೇ ಹೇಳಲಾಗುತ್ತಿದೆ. ಖರ್ಗೆ ಅವರು ನಾಮಪತ್ರ ಸಲ್ಲಿಕೆ ವೇಳೆ ನಾಯಕರ ದೊಡ್ಡ ದಂಡೇ ಎಐಸಿಸಿ ಕಚೇರಿಯಲ್ಲಿ ನೆರೆದಿತ್ತು.</p>.<p>ಕಾಂಗ್ರೆಸ್ನ ಹಿರಿಯ ನಾಯಕರು ಮತ್ತು ಜಿ–23 ಬಣದ ಆನಂದ್ ಶರ್ಮಾ, ಪೃಥ್ವಿರಾಜ್ ಚವಾಣ್, ಮನೀಶ್ ತಿವಾರಿ ಮತ್ತು ಭೂಪಿಂದರ್ ಹೂಡಾ ಮುಂತಾದವರು ಅವರ ಜೊತೆಗಿದ್ದರು..</p>.<p>ಜಿ23 ಬಣದಲ್ಲಿ ಗುರುತಿಸಿಕೊಂಡಿರುವ ಸಂಸದ ಶಶಿ ತರೂರ್ ಸಹ 5 ಸೆಟ್ ನಾಮಪತ್ರ ಸಲ್ಲಿಸಿದರು. ಇನ್ನು, ಜಾರ್ಖಂಡ್ನ ಮಾಜಿ ಸಚಿವ ತ್ರಿಪಾಠಿ ಒಂದು ಸೆಟ್ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ನ ಕೇಂದ್ರೀಯ ಚುನಾವಣಾ ಸಮಿತಿಯ ಅಧ್ಯಕ್ಷರಾದ ಮಧುಸೂದನ್ ಮಿಸ್ತ್ರಿ, ತ್ರಿಪಾಠಿ ಅವರ ಜೊತೆಗಿದ್ದರು.</p>.<p><br />‘ಈ ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಹಲವು ನಾಯಕರು, ಪಕ್ಷದ ಕಾರ್ಯಕರ್ತರು ಮತ್ತು ಪ್ರಮುಖ ರಾಜ್ಯಗಳ ನಿಯೋಗಗಳಿಂದ ಪ್ರೋತ್ಸಾಹ ಸಿಕ್ಕಿದೆ. ನಾಮಪತ್ರ ಸಲ್ಲಿಸುವ ವೇಳೆ ನನ್ನ ಜೊತೆಗಿದ್ದ ಎಲ್ಲರಿಗೂ ಧನ್ಯವಾದ’ಎಂದು ಖರ್ಗೆ ಹೇಳಿದರು.</p>.<p>‘ನಾನು ಸದಾ ಹೋರಾಟಗಾರ, ನನ್ನ ಬಾಲ್ಯದಿಂದಲೂ ನಾನು ನಂಬಿರುವ ಕಾಂಗ್ರೆಸ್ನ ಆದರ್ಶಗಳನ್ನು ಎತ್ತಿಹಿಡಿಯಲು ಮತ್ತಷ್ಟು ಹೋರಾಟ ಮಾಡಲು ಸಿದ್ಧನಿದ್ದೇನೆ’ಎಂದು ಅವರು ಹೇಳಿದ್ಧಾರೆ.</p>.<p>ಈ ಮಧ್ಯೆ, ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಭೀಷ್ಮ ಪಿತಾಮಹ’ಎಂದು ಕರೆದಿರುವ 66 ವರ್ಷದ ಶಶಿ ತರೂರ್, ಪಕ್ಷದ ಅಧ್ಯಕ್ಷರನ್ನು ಪ್ರಜಾಸತ್ತಾತ್ಮಕ ಪ್ರಕ್ರಿಯೆ ಮೂಲಕ ಆಯ್ಕೆ ಮಾಡುತ್ತಿರುವ ಏಕೈಕ ಪಕ್ಷವಾದ ಕಾಂಗ್ರೆಸ್ನ ಅಧ್ಯಕ್ಷಗಾದಿಗೆ ಸ್ಪರ್ಧಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ.</p>.<p>‘ಇದು ಸ್ನೇಹಯುತ ಸ್ಪರ್ಧೆಯಾಗಲಿದ್ದು, ನಾವು ಶತ್ರುಗಳಲ್ಲ. ಖರ್ಗೆ ಅವರಿಗೆ ಯಾವುದೇ ಅಗೌರವ ತೋರುತ್ತಿಲ್ಲ. ನನ್ನ ಚಿಂತನೆಗಳನ್ನು ಮುಂದಿಡುತ್ತಿದ್ದೇನೆ’ಎಂದು ತರೂರ್ ಹೇಳಿದರು.<br /><br />ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ಕಾಂಗ್ರೆಸ್ನ 9,100ಕ್ಕೂ ಅಧಿಕ ಮಂದಿ ಮತದಾನ ಮಾಡಲು ಅರ್ಹರಾಗಿದ್ದಾರೆ. ಅಕ್ಟೋಬರ್ 17ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19ಕ್ಕೆ ಫಲಿತಾಂಶ ಹೊರಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣಾ ಕಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ತಿರುವನಂತಪುರ ಸಂಸದ ಶಶಿ ತರೂರ್ ಮತ್ತು ಜಾರ್ಖಂಡ್ನ ಮಾಜಿ ಸಚಿವ ಕೆ.ಎನ್. ತ್ರಿಪಾಠಿ ಉಳಿದಿದ್ದಾರೆ.</p>.<p>ಹೈಕಮಾಂಡ್ನಿಂದ ಬೆಂಬಲ ಪಡೆದಿರುವ ಮಲ್ಲಿಕಾರ್ಜುನ ಖರ್ಗೆ ಗೆಲ್ಲುವ ಅಭ್ಯರ್ಥಿ ಎಂದೇ ಹೇಳಲಾಗುತ್ತಿದೆ. ಖರ್ಗೆ ಅವರು ನಾಮಪತ್ರ ಸಲ್ಲಿಕೆ ವೇಳೆ ನಾಯಕರ ದೊಡ್ಡ ದಂಡೇ ಎಐಸಿಸಿ ಕಚೇರಿಯಲ್ಲಿ ನೆರೆದಿತ್ತು.</p>.<p>ಕಾಂಗ್ರೆಸ್ನ ಹಿರಿಯ ನಾಯಕರು ಮತ್ತು ಜಿ–23 ಬಣದ ಆನಂದ್ ಶರ್ಮಾ, ಪೃಥ್ವಿರಾಜ್ ಚವಾಣ್, ಮನೀಶ್ ತಿವಾರಿ ಮತ್ತು ಭೂಪಿಂದರ್ ಹೂಡಾ ಮುಂತಾದವರು ಅವರ ಜೊತೆಗಿದ್ದರು..</p>.<p>ಜಿ23 ಬಣದಲ್ಲಿ ಗುರುತಿಸಿಕೊಂಡಿರುವ ಸಂಸದ ಶಶಿ ತರೂರ್ ಸಹ 5 ಸೆಟ್ ನಾಮಪತ್ರ ಸಲ್ಲಿಸಿದರು. ಇನ್ನು, ಜಾರ್ಖಂಡ್ನ ಮಾಜಿ ಸಚಿವ ತ್ರಿಪಾಠಿ ಒಂದು ಸೆಟ್ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ನ ಕೇಂದ್ರೀಯ ಚುನಾವಣಾ ಸಮಿತಿಯ ಅಧ್ಯಕ್ಷರಾದ ಮಧುಸೂದನ್ ಮಿಸ್ತ್ರಿ, ತ್ರಿಪಾಠಿ ಅವರ ಜೊತೆಗಿದ್ದರು.</p>.<p><br />‘ಈ ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಹಲವು ನಾಯಕರು, ಪಕ್ಷದ ಕಾರ್ಯಕರ್ತರು ಮತ್ತು ಪ್ರಮುಖ ರಾಜ್ಯಗಳ ನಿಯೋಗಗಳಿಂದ ಪ್ರೋತ್ಸಾಹ ಸಿಕ್ಕಿದೆ. ನಾಮಪತ್ರ ಸಲ್ಲಿಸುವ ವೇಳೆ ನನ್ನ ಜೊತೆಗಿದ್ದ ಎಲ್ಲರಿಗೂ ಧನ್ಯವಾದ’ಎಂದು ಖರ್ಗೆ ಹೇಳಿದರು.</p>.<p>‘ನಾನು ಸದಾ ಹೋರಾಟಗಾರ, ನನ್ನ ಬಾಲ್ಯದಿಂದಲೂ ನಾನು ನಂಬಿರುವ ಕಾಂಗ್ರೆಸ್ನ ಆದರ್ಶಗಳನ್ನು ಎತ್ತಿಹಿಡಿಯಲು ಮತ್ತಷ್ಟು ಹೋರಾಟ ಮಾಡಲು ಸಿದ್ಧನಿದ್ದೇನೆ’ಎಂದು ಅವರು ಹೇಳಿದ್ಧಾರೆ.</p>.<p>ಈ ಮಧ್ಯೆ, ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಭೀಷ್ಮ ಪಿತಾಮಹ’ಎಂದು ಕರೆದಿರುವ 66 ವರ್ಷದ ಶಶಿ ತರೂರ್, ಪಕ್ಷದ ಅಧ್ಯಕ್ಷರನ್ನು ಪ್ರಜಾಸತ್ತಾತ್ಮಕ ಪ್ರಕ್ರಿಯೆ ಮೂಲಕ ಆಯ್ಕೆ ಮಾಡುತ್ತಿರುವ ಏಕೈಕ ಪಕ್ಷವಾದ ಕಾಂಗ್ರೆಸ್ನ ಅಧ್ಯಕ್ಷಗಾದಿಗೆ ಸ್ಪರ್ಧಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ.</p>.<p>‘ಇದು ಸ್ನೇಹಯುತ ಸ್ಪರ್ಧೆಯಾಗಲಿದ್ದು, ನಾವು ಶತ್ರುಗಳಲ್ಲ. ಖರ್ಗೆ ಅವರಿಗೆ ಯಾವುದೇ ಅಗೌರವ ತೋರುತ್ತಿಲ್ಲ. ನನ್ನ ಚಿಂತನೆಗಳನ್ನು ಮುಂದಿಡುತ್ತಿದ್ದೇನೆ’ಎಂದು ತರೂರ್ ಹೇಳಿದರು.<br /><br />ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ಕಾಂಗ್ರೆಸ್ನ 9,100ಕ್ಕೂ ಅಧಿಕ ಮಂದಿ ಮತದಾನ ಮಾಡಲು ಅರ್ಹರಾಗಿದ್ದಾರೆ. ಅಕ್ಟೋಬರ್ 17ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19ಕ್ಕೆ ಫಲಿತಾಂಶ ಹೊರಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>