2 ದಿನಗಳ ಹಿಂದೆ ರಸ್ತೆಯಲ್ಲಿ ಚೀಲದಲ್ಲಿ ಕಟ್ಟಿ ಎಸೆದ ಸ್ಥಿತಿಯಲ್ಲಿ ಯುವತಿ ಪತ್ತೆಯಾಗಿದ್ದಳು. ಐವರು ಯುವತಿಯನ್ನು ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರವೆಸಗಿ, ಆಕೆಯ ಕೈಕಾಲುಗಳನ್ನು ಕಟ್ಟಿ ಚೀಲದಲ್ಲಿ ತುಂಬಿ ಎಸೆದುಹೋಗಿದ್ದರು ಎಂದು ಸುದ್ದಿಯಾಗಿತ್ತು. ಪ್ರಕರಣಕ್ಕೆ ಪ್ರತಿಕ್ರಿಯಿಸಿದ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷರು ‘ನಿರ್ಭಯಾ ಹತ್ಯೆಯನ್ನು ನೆನಪಿಸುವ ಮತ್ತೊಂದು ಪ್ರಕರಣ’ ಎಂದು ಟ್ವೀಟ್ ಮಾಡಿದ್ದರು.