ಚಂಡೀಗಡ: ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣ ದುರದೃಷ್ಟಕರ ಎಂದು ಹೇಳಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಇದನ್ನು ರಾಜಕೀಯಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.
ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ಪಂಜಾಬ್ ಸರ್ಕಾರವು ಪೊಲೀಸ್ ಭದ್ರತೆಯನ್ನು ವಾಪಸ್ ಪಡೆದ ಮರುದಿನವೇ (ಮೇ 29) ದುಷ್ಕರ್ಮಿಗಳ ಗುಂಡೇಟಿನಿಂದ ಮೂಸೆವಾಲಾ ಹತ್ಯೆಗೀಡಾಗಿದ್ದರು.