ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ವಿವಿಧ ಸೆಕ್ಷನ್ಗಳ ಅಡಿ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ನೀಡಲಾಗಿರುವ ಅಧಿಕಾರಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ 200ಕ್ಕೂ ಹೆಚ್ಚು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ತಿರಸ್ಕರಿಸಿತ್ತು. ಇದು ಸೇರಿದಂತೆ ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯ ನೀಡಿದ್ದ ಕೆಲವು ತೀರ್ಪುಗಳ ಬಗ್ಗೆ ಉಲ್ಲೇಖಿಸಿ ಹೇಳಿಕೆ ನೀಡಿದ್ದ ಸಿಬಲ್, ಸುಪ್ರೀಂ ಕೋರ್ಟ್ ಮೇಲೆ ಯಾವುದೇ ಭರವಸೆ ಉಳಿದಿಲ್ಲ ಎಂದಿದ್ದರು. ಜತೆಗೆ, ಸೂಕ್ಷ್ಮ ಪ್ರಕರಣಗಳ ವಿಚಾರಣೆಯನ್ನು ಕೆಲವೇ ಜಡ್ಜ್ಗಳಿಗೆ ವಹಿಸಲಾಗುತ್ತಿದೆ ಎಂದೂ ದೂರಿದ್ದರು.