<p class="title"><strong>ಹೈದರಾಬಾದ್: </strong>ಎಲ್ಲ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ಗಳ (ಕೆಸಿಸಿ) ಪ್ರಯೋಜನವನ್ನು ವಿಸ್ತರಿಸಲು ಪ್ರಮಾಣಿತ ಕಾರ್ಯಚರಣಾ ಕಾರ್ಯ ವಿಧಾನಗಳು ಸಿದ್ಧವಾಗುತ್ತಿವೆ’ ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆಯ ರಾಜ್ಯ ಸಚಿವ ಎಲ್. ಮುರುಗನ್ ಭಾನುವಾರ ಹೇಳಿದ್ದಾರೆ.</p>.<p class="title">ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯ (ಎನ್ಎಫ್ಡಿಬಿ) ಚಟುವಟಿಕೆಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಸರ್ಕಾರವು ಈಗಾಗಲೇ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡುಗಳನ್ನು ವಿತರಿಸುತ್ತಿದೆ. ಮೀನುಗಾರರಿಗೂ ಈ ಸೌಲಭ್ಯವನ್ನು ವಿಸ್ತರಿಸಲು ಕಾರ್ಯ ರೂಪಿಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p class="bodytext">‘ಸರ್ಕಾರವು ಸಮುದ್ರ ಆಹಾರ ಉತ್ಪನ್ನಗಳ ರಫ್ತು ಹೆಚ್ಚಿಸುವ ಯೋಜನೆ ಹೊಂದಿದೆ. ದೇಶದ ಐದು ಮೀನುಗಾರಿಕಾ ಬಂದರುಗಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಆಧುನೀಕರಿಸಿ ಸಂಸ್ಕರಣೆ ಘಟಕಗಳು, ಕೋಲ್ಡ್ ಸ್ಟೋರೇಜ್ ಇತರೆ ಸೌಲಭ್ಯಗಳನ್ನು ಒದಗಿಸಲಾಗುವುದು’ ಎಂದೂ ಮುರುಗನ್ ಮಾಹಿತಿ ನೀಡಿದರು.</p>.<p class="bodytext"><strong>ಕಡಲಕಳೆ ಪಾರ್ಕ್: </strong>‘ತಮಿಳುನಾಡಿನಲ್ಲಿ ಕಡಲಕಳೆ ಪಾರ್ಕ್ ಬರಲಿದೆ. ಇದು ಹೊಸ ಪರಿಕಲ್ಪನೆಯಾಗಿದ್ದು, ನಮ್ಮ ಸರ್ಕಾರವು ಕಡಲಕಳೆ ಕೃಷಿಯನ್ನು ಪ್ರೋತ್ಸಾಹಿಸುತ್ತಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಹೈದರಾಬಾದ್: </strong>ಎಲ್ಲ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ಗಳ (ಕೆಸಿಸಿ) ಪ್ರಯೋಜನವನ್ನು ವಿಸ್ತರಿಸಲು ಪ್ರಮಾಣಿತ ಕಾರ್ಯಚರಣಾ ಕಾರ್ಯ ವಿಧಾನಗಳು ಸಿದ್ಧವಾಗುತ್ತಿವೆ’ ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆಯ ರಾಜ್ಯ ಸಚಿವ ಎಲ್. ಮುರುಗನ್ ಭಾನುವಾರ ಹೇಳಿದ್ದಾರೆ.</p>.<p class="title">ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯ (ಎನ್ಎಫ್ಡಿಬಿ) ಚಟುವಟಿಕೆಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಸರ್ಕಾರವು ಈಗಾಗಲೇ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡುಗಳನ್ನು ವಿತರಿಸುತ್ತಿದೆ. ಮೀನುಗಾರರಿಗೂ ಈ ಸೌಲಭ್ಯವನ್ನು ವಿಸ್ತರಿಸಲು ಕಾರ್ಯ ರೂಪಿಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p class="bodytext">‘ಸರ್ಕಾರವು ಸಮುದ್ರ ಆಹಾರ ಉತ್ಪನ್ನಗಳ ರಫ್ತು ಹೆಚ್ಚಿಸುವ ಯೋಜನೆ ಹೊಂದಿದೆ. ದೇಶದ ಐದು ಮೀನುಗಾರಿಕಾ ಬಂದರುಗಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಆಧುನೀಕರಿಸಿ ಸಂಸ್ಕರಣೆ ಘಟಕಗಳು, ಕೋಲ್ಡ್ ಸ್ಟೋರೇಜ್ ಇತರೆ ಸೌಲಭ್ಯಗಳನ್ನು ಒದಗಿಸಲಾಗುವುದು’ ಎಂದೂ ಮುರುಗನ್ ಮಾಹಿತಿ ನೀಡಿದರು.</p>.<p class="bodytext"><strong>ಕಡಲಕಳೆ ಪಾರ್ಕ್: </strong>‘ತಮಿಳುನಾಡಿನಲ್ಲಿ ಕಡಲಕಳೆ ಪಾರ್ಕ್ ಬರಲಿದೆ. ಇದು ಹೊಸ ಪರಿಕಲ್ಪನೆಯಾಗಿದ್ದು, ನಮ್ಮ ಸರ್ಕಾರವು ಕಡಲಕಳೆ ಕೃಷಿಯನ್ನು ಪ್ರೋತ್ಸಾಹಿಸುತ್ತಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>