ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸುತ್ತಿರುವ ಕಿಸಾನ್ ಮಜ್ದೂರ್ ಸಂಘದ 60 ರೈತರ ನಿಯೋಗವು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಗುರುವಾರ ಭೇಟಿ ಮಾಡಿದೆ.
ಕೃಷಿ ಕ್ಷೇತ್ರವನ್ನು ದೊಡ್ಡ ಪ್ರಮಾಣದಲ್ಲಿ ಸುಧಾರಿಸುವ ಪ್ರಯತ್ನಗಳು ಕಳೆದ ಆರು ವರ್ಷಗಳಲ್ಲಿ ನಡೆದಿವೆ. ರೈತರು ದಿನಾಂಕ ನಿಗದಿಪಡಿಸಿ ಮಾತುಕತೆಗೆ ಬರಬೇಕು ಎಂದು ನರೇಂದ್ರ ಸಿಂಗ್ ತೋಮರ್ ಬುಧವಾರ ವಿನಂತಿಸಿಕೊಂಡಿದ್ದರು.
ಕೃಷಿ ಕಾಯ್ದೆಗಳಿಗೆ ಸಂಬಂಧಿಸಿ ಸ್ಪಷ್ಟ ಮತ್ತು ಲಿಖಿತ ಪ್ರಸ್ತಾವ ಮುಂದಿಟ್ಟರೆ ಮಾತ್ರ ಸರ್ಕಾರದೊಂದಿಗೆ ಮಾತುಕತೆ ಸಾಧ್ಯ ಎಂದು ರೈತರ ಸಂಘಟನೆಗಳ ಮುಖಂಡರು ತಿಳಿಸಿದ್ದರು.
ಈ ವಿಚಾರವಾಗಿ ಮಾತುಕತೆ ನಡೆಸಲು ರೈತ ಮುಖಂಡರು ನವದೆಹಲಿಯ ಕೃಷಿ ಭವನದಲ್ಲಿ ನರೇಂದ್ರ ಸಿಂಗ್ ತೋಮರ್ ಅವರನ್ನು ಗುರುವಾರ ಭೇಟಿ ಮಾಡಿದ್ದಾರೆ.
Delhi: A delegation of 60 farmers belonging to Kisaan Majdoor Sangh, Baghpat meets Union Agriculture Minister Narendra Singh Tomar at Krishi Bhawan pic.twitter.com/v1KWxShAKZ