<p><strong>ಭುವನೇಶ್ವರ: </strong>ಕೊರೊನಾದಿಂದಾಗಿ ಐದು ತಿಂಗಳಿನಿಂದ ಮುಚ್ಚಿದ್ದ ಒಡಿಶಾದ ಕೊನಾರ್ಕ್ ಸೂರ್ಯ ದೇವಾಲಯದ ದ್ವಾರಗಳನ್ನು ಮಂಗಳವಾರದಿಂದ ತೆರೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಹಲವು ದಿನಗಳ ಹಿಂದೆಯೇರಾಜ–ರಾಣಿ ದೇವಸ್ಥಾನ, ಉದಯಗಿರಿ, ಲಲಿತಗಿರಿ ಸ್ಮಾರಕಗಳನ್ನು ತೆರೆಯಲಾಗಿತ್ತು. ಆದರೆ ಪ್ರವಾಸಿಗರ ಆಕರ್ಷಣೀಯ ತಾಣವಾದ ಕೊನಾರ್ಕ್ ಸೂರ್ಯ ದೇವಾಲಯವನ್ನು ಮಂಗಳವಾರದಿಂದ(ಸೆ.01) ತೆರೆಯಲಾಗಿದೆ’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆಯ ಹಿರಿಯ ಅಧಿಕಾರಿಅರುಣ್ ಕುಮಾರ್ ಮಲಿಖ್ ಅವರು ಹೇಳಿದರು.</p>.<p>‘ಕೋವಿಡ್–19 ಮಾರ್ಗಸೂಚಿಗೆ ಅನುಗುಣವಾಗಿ, ಪ್ರವಾಸಿಗರಿಗೆ ಸ್ಮಾರಕಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಸ್ಮಾರಕಗಳಿಗೆ ಭೇಟಿ ನೀಡುವವರು ಮುಖಗವಸು ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಅಲ್ಲದೇ ಪ್ರವಾಸಿಗರಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸಿದ ಬಳಿಕ ಒಳ ಪ್ರವೇಶಿಸಲು ಅನುಮತಿ ನೀಡಲಾಗುವುದು’ ಎಂದು ಅವರು ಮಾಹಿತಿ ನೀಡಿದರು.</p>.<p>‘ಭಕ್ತರು ಆನ್ಲೈನ್ ಮೂಲಕ ಶುಲ್ಕ ಪಾವತಿ ಮಾಡಬಹುದು. ಎರಡು ಹಂತದಲ್ಲಿ ಪ್ರತಿನಿತ್ಯ ಕೇವಲ 2,500 ಜನರಿಗೆ ಮಾತ್ರ ದೇವಸ್ಥಾನದೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುವುದು. ಬೆಳಿಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆ ತನಕ 1,500 ಭಕ್ತರಿಗೆ ನಂತರ 1,000 ಜನರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಲಾಗಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ: </strong>ಕೊರೊನಾದಿಂದಾಗಿ ಐದು ತಿಂಗಳಿನಿಂದ ಮುಚ್ಚಿದ್ದ ಒಡಿಶಾದ ಕೊನಾರ್ಕ್ ಸೂರ್ಯ ದೇವಾಲಯದ ದ್ವಾರಗಳನ್ನು ಮಂಗಳವಾರದಿಂದ ತೆರೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಹಲವು ದಿನಗಳ ಹಿಂದೆಯೇರಾಜ–ರಾಣಿ ದೇವಸ್ಥಾನ, ಉದಯಗಿರಿ, ಲಲಿತಗಿರಿ ಸ್ಮಾರಕಗಳನ್ನು ತೆರೆಯಲಾಗಿತ್ತು. ಆದರೆ ಪ್ರವಾಸಿಗರ ಆಕರ್ಷಣೀಯ ತಾಣವಾದ ಕೊನಾರ್ಕ್ ಸೂರ್ಯ ದೇವಾಲಯವನ್ನು ಮಂಗಳವಾರದಿಂದ(ಸೆ.01) ತೆರೆಯಲಾಗಿದೆ’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆಯ ಹಿರಿಯ ಅಧಿಕಾರಿಅರುಣ್ ಕುಮಾರ್ ಮಲಿಖ್ ಅವರು ಹೇಳಿದರು.</p>.<p>‘ಕೋವಿಡ್–19 ಮಾರ್ಗಸೂಚಿಗೆ ಅನುಗುಣವಾಗಿ, ಪ್ರವಾಸಿಗರಿಗೆ ಸ್ಮಾರಕಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಸ್ಮಾರಕಗಳಿಗೆ ಭೇಟಿ ನೀಡುವವರು ಮುಖಗವಸು ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಅಲ್ಲದೇ ಪ್ರವಾಸಿಗರಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸಿದ ಬಳಿಕ ಒಳ ಪ್ರವೇಶಿಸಲು ಅನುಮತಿ ನೀಡಲಾಗುವುದು’ ಎಂದು ಅವರು ಮಾಹಿತಿ ನೀಡಿದರು.</p>.<p>‘ಭಕ್ತರು ಆನ್ಲೈನ್ ಮೂಲಕ ಶುಲ್ಕ ಪಾವತಿ ಮಾಡಬಹುದು. ಎರಡು ಹಂತದಲ್ಲಿ ಪ್ರತಿನಿತ್ಯ ಕೇವಲ 2,500 ಜನರಿಗೆ ಮಾತ್ರ ದೇವಸ್ಥಾನದೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುವುದು. ಬೆಳಿಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆ ತನಕ 1,500 ಭಕ್ತರಿಗೆ ನಂತರ 1,000 ಜನರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಲಾಗಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>