<p class="bodytext"><strong>ಮುಂಬೈ: </strong>‘ಬೆಳಗಾವಿಯಲ್ಲಿ ಮರಾಠಿ ಭಾಷಿಕರ ಮೇಲೆ ‘ದೌರ್ಜನ್ಯ’ ಎಸಗಲಾಗುತ್ತಿದೆ ಎಂಬ ಕುರಿತು ಕರ್ನಾಟಕದ ರಾಜ್ಯಪಾಲರ ಜೊತೆಗೆ ಕಟುಶಬ್ದಗಳಲ್ಲಿ ಚರ್ಚಿಸಬೇಕು’ ಎಂದು ಶಿವಸೇನೆ ಮಹಾರಾಷ್ಟ್ರದ ರಾಜ್ಯಪಾಲರಿಗೆ ಆಗ್ರಹಪಡಿಸಿದೆ.</p>.<p class="bodytext">ತನ್ನ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಶಿವಸೇನೆ, ‘ಸೂರ್ಯ –ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಭಾಗ’ ಎಂಬ ಕರ್ನಾಟಕದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಹೇಳಿಕೆ ಉಲ್ಲೇಖಿಸಿ ತರಾಟೆಗೆ ತೆಗೆದುಕೊಂಡಿದೆ.</p>.<p class="bodytext">‘ಬೆಳಗಾವಿ, ಇತರೆ ಗಡಿ ಪ್ರದೇಶ ಕುರಿತಂತೆ ಕರ್ನಾಟಕ –ಮಹಾರಾಷ್ಟ್ರ ನಡುವಣ ವಿವಾದ ಸದ್ಯ ಸುಪ್ರೀಂ ಕೋರ್ಟ್ನಲ್ಲಿದೆ. ಆಗಸದಲ್ಲಿ ಸೂರ್ಯ, ಚಂದ್ರ ಇದೆಯೋ ಎಂಬುದನ್ನು ನೋಡಿ ಕೋರ್ಟ್ ಆದೇಶಿಸುವುದಿಲ್ಲ’ ಎಂದು ಶಿವಸೇನೆ ಹೇಳಿದೆ.</p>.<p class="bodytext">ಮರಾಠಿ ಭಾಷಿಕರ ಮೇಲೆ ಈ ಭಾಗದಲ್ಲಿ ಕಳೆದ 60 ವರ್ಷಗಳಿಂದ ದೌರ್ಜನ್ಯ ನಡೆಯುತ್ತಿದೆ. ಕರ್ನಾಟಕ ಇದನ್ನು ನಿಭಾಯಿಸುತ್ತಿರುವ ಕ್ರಮ ಈ ಜನರಲ್ಲಿ ಆಕ್ರೋಶ ಮೂಡಿಸಿದೆ ಎಂದು ಶಿವಸೇನೆ ಸಂಪಾದಕೀಯದಲ್ಲಿ ಆರೋಪಿಸಿದೆ.</p>.<p>ಬೆಳಗಾವಿಯಲ್ಲಿರುವ ಮರಾಠಿ ಭಾಷಿಕರನ್ನು ಬೆಂಬಲಿಸಿ ಮಹಾರಾಷ್ಟ್ರದ ಸಚಿವರು ರಾಜ್ಯೋತ್ಸವ ದಿನವಾಗಿದ್ದ ಭಾನುವಾರ ಕಪ್ಪುಪಟ್ಟಿಯನ್ನು ಧರಿಸಿ ಕರಾಳ ದಿನ ಆಚರಣೆಯನ್ನು ಬೆಂಬಲಿಸಿದ್ದರು.</p>.<p>ಮಹಾರಾಷ್ಟ್ರ ರಾಜ್ಯಪಾಲರು ಈ ಕುರಿತು ಕರ್ನಾಟಕ ರಾಜ್ಯಪಾಲರ ಜೊತೆಗೆ ಚರ್ಚಿಸಬೇಕು. ಕನಿಷ್ಠ ಬೆಳಗಾವಿಯ ನಿಯೋಗ ಪ್ರಧಾನಿಯನ್ನು ಭೇಟಿ ಮಾಡಲು ಸಮಯಾವಕಾಶ ನಿಗದಿಪಡಿಸಲಾದರೂ ನೆರವು ನೀಡಬೇಕು ಎಂದು ಒತ್ತಾಯಿಸಿದೆ.</p>.<p>ಕರ್ನಾಟಕದ ಲಕ್ಷಾಂತರ ಜನರು ಮಹಾರಾಷ್ಟ್ರದಲ್ಲಿ ಉದ್ಯಮ, ವ್ಯಾಪಾರ ನಡೆಸುತ್ತಾ ಸಂತೋಷದಿಂದ ಜೀವಿಸುತ್ತಿದ್ದಾರೆ ಎಂಬುದನ್ನು ಲಕ್ಷ್ಮಣ ಸವದಿ ಅವರಂಥ ಸಚಿವರು ಮರೆಯಬಾರದು ಎಂದು ಸಂಪಾದಕೀಯದಲ್ಲಿ ಬರೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಮುಂಬೈ: </strong>‘ಬೆಳಗಾವಿಯಲ್ಲಿ ಮರಾಠಿ ಭಾಷಿಕರ ಮೇಲೆ ‘ದೌರ್ಜನ್ಯ’ ಎಸಗಲಾಗುತ್ತಿದೆ ಎಂಬ ಕುರಿತು ಕರ್ನಾಟಕದ ರಾಜ್ಯಪಾಲರ ಜೊತೆಗೆ ಕಟುಶಬ್ದಗಳಲ್ಲಿ ಚರ್ಚಿಸಬೇಕು’ ಎಂದು ಶಿವಸೇನೆ ಮಹಾರಾಷ್ಟ್ರದ ರಾಜ್ಯಪಾಲರಿಗೆ ಆಗ್ರಹಪಡಿಸಿದೆ.</p>.<p class="bodytext">ತನ್ನ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಶಿವಸೇನೆ, ‘ಸೂರ್ಯ –ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಭಾಗ’ ಎಂಬ ಕರ್ನಾಟಕದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಹೇಳಿಕೆ ಉಲ್ಲೇಖಿಸಿ ತರಾಟೆಗೆ ತೆಗೆದುಕೊಂಡಿದೆ.</p>.<p class="bodytext">‘ಬೆಳಗಾವಿ, ಇತರೆ ಗಡಿ ಪ್ರದೇಶ ಕುರಿತಂತೆ ಕರ್ನಾಟಕ –ಮಹಾರಾಷ್ಟ್ರ ನಡುವಣ ವಿವಾದ ಸದ್ಯ ಸುಪ್ರೀಂ ಕೋರ್ಟ್ನಲ್ಲಿದೆ. ಆಗಸದಲ್ಲಿ ಸೂರ್ಯ, ಚಂದ್ರ ಇದೆಯೋ ಎಂಬುದನ್ನು ನೋಡಿ ಕೋರ್ಟ್ ಆದೇಶಿಸುವುದಿಲ್ಲ’ ಎಂದು ಶಿವಸೇನೆ ಹೇಳಿದೆ.</p>.<p class="bodytext">ಮರಾಠಿ ಭಾಷಿಕರ ಮೇಲೆ ಈ ಭಾಗದಲ್ಲಿ ಕಳೆದ 60 ವರ್ಷಗಳಿಂದ ದೌರ್ಜನ್ಯ ನಡೆಯುತ್ತಿದೆ. ಕರ್ನಾಟಕ ಇದನ್ನು ನಿಭಾಯಿಸುತ್ತಿರುವ ಕ್ರಮ ಈ ಜನರಲ್ಲಿ ಆಕ್ರೋಶ ಮೂಡಿಸಿದೆ ಎಂದು ಶಿವಸೇನೆ ಸಂಪಾದಕೀಯದಲ್ಲಿ ಆರೋಪಿಸಿದೆ.</p>.<p>ಬೆಳಗಾವಿಯಲ್ಲಿರುವ ಮರಾಠಿ ಭಾಷಿಕರನ್ನು ಬೆಂಬಲಿಸಿ ಮಹಾರಾಷ್ಟ್ರದ ಸಚಿವರು ರಾಜ್ಯೋತ್ಸವ ದಿನವಾಗಿದ್ದ ಭಾನುವಾರ ಕಪ್ಪುಪಟ್ಟಿಯನ್ನು ಧರಿಸಿ ಕರಾಳ ದಿನ ಆಚರಣೆಯನ್ನು ಬೆಂಬಲಿಸಿದ್ದರು.</p>.<p>ಮಹಾರಾಷ್ಟ್ರ ರಾಜ್ಯಪಾಲರು ಈ ಕುರಿತು ಕರ್ನಾಟಕ ರಾಜ್ಯಪಾಲರ ಜೊತೆಗೆ ಚರ್ಚಿಸಬೇಕು. ಕನಿಷ್ಠ ಬೆಳಗಾವಿಯ ನಿಯೋಗ ಪ್ರಧಾನಿಯನ್ನು ಭೇಟಿ ಮಾಡಲು ಸಮಯಾವಕಾಶ ನಿಗದಿಪಡಿಸಲಾದರೂ ನೆರವು ನೀಡಬೇಕು ಎಂದು ಒತ್ತಾಯಿಸಿದೆ.</p>.<p>ಕರ್ನಾಟಕದ ಲಕ್ಷಾಂತರ ಜನರು ಮಹಾರಾಷ್ಟ್ರದಲ್ಲಿ ಉದ್ಯಮ, ವ್ಯಾಪಾರ ನಡೆಸುತ್ತಾ ಸಂತೋಷದಿಂದ ಜೀವಿಸುತ್ತಿದ್ದಾರೆ ಎಂಬುದನ್ನು ಲಕ್ಷ್ಮಣ ಸವದಿ ಅವರಂಥ ಸಚಿವರು ಮರೆಯಬಾರದು ಎಂದು ಸಂಪಾದಕೀಯದಲ್ಲಿ ಬರೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>