<p><strong>ನವದೆಹಲಿ</strong>: ಕೇರಳದ ಕೋಯಿಕ್ಕೋಡ್ನಲ್ಲಿ ಕಳೆದ ವರ್ಷ ಏರ್ ಇಂಡಿಯಾ ಎಕ್ಸ್ಪ್ರೆಸ್ನ ವಿಮಾನ ಅಪಘಾತಕ್ಕೀಡಾದ ಘಟನೆಯಲ್ಲಿ ಗಾಯಗೊಂಡವರು ಹಾಗೂ ಮೃತರ ಕುಟುಂಬಗಳಿಗೆ ಅಂತಿಮ ಪರಿಹಾರವನ್ನು ವಿತರಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.</p>.<p>ಈ ದುರ್ಘಟನೆಯಲ್ಲಿ ಗಾಯಗೊಂಡಿದ್ದ 165 ಜನರ ಪೈಕಿ 80 ಜನರು ಪರಿಹಾರವನ್ನು ಸ್ವೀಕರಿಸಿದ್ದಾರೆ. ಮೃತಪಟ್ಟ 19 ಜನ ಪ್ರಯಾಣಿಕರ ಕುಟುಂಬಸ್ಥರು ಹಾಗೂ ಗಾಯಗೊಂಡವರ ಪೈಕಿ 85 ಜನರ ಕುಟುಂಬಗಳ ಸದಸ್ಯರು ಪರಿಹಾರ ಮೊತ್ತವನ್ನು ಸ್ವೀಕರಿಸಬೇಕಿದೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ತಿಳಿಸಿದೆ.</p>.<p>‘ಗಾಯಗೊಂಡವರು ಹಾಗೂ ಮೃತರ ಕುಟುಂಬದವರ ಪೈಕಿ ಯಾರೂ ಪರಿಹಾರವನ್ನು ತಿರಸ್ಕರಿಸಿಲ್ಲ. ಪರಿಹಾರಕ್ಕೆ ತಕರಾರು ಎತ್ತಿ ಯಾರೂ ಸಹ ಕೋರ್ಟ್ ಮೊರೆ ಹೋಗಿಲ್ಲ’ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ನ ವಕ್ತಾರ ತಿಳಿಸಿದ್ದಾರೆ.</p>.<p>ಕಳೆದ ವರ್ಷ ಆಗಸ್ಟ್ 7ರಂದು ದುಬೈಯಿಂದ ಬಂದಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು (ಐಎಕ್ಸ್ 1344) ಕೋಯಿಕ್ಕೋಡ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ವೇಯಿಂದ ಜಾರಿ ಸಮೀಪದ ಕಣಿವೆಗೆ ಬಿದ್ದು ಎರಡು ಹೋಳಾಗಿತ್ತು.</p>.<p>ಅಪಘಾತದಲ್ಲಿ 12 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನಮೃತಪಟ್ಟ ಪ್ರಯಾಣಿಕರ ಕುಟುಂಬದವರಿಗೆ ತಲಾ ₹10 ಲಕ್ಷ, 12 ವರ್ಷದ ಒಳಗಿನವರು ಮೃತಪಟ್ಟಿದ್ದರಿಗೆ ಅವರ ಕುಟುಂಬದವರಿಗೆ ತಲಾ ₹ 5 ಲಕ್ಷ ಮತ್ತು ತೀವ್ರವಾಗಿ ಗಾಯಗೊಂಡವರಿಗೆ ತಲಾ ₹2 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾಗಿರುವವರಿಗೆ ತಲಾ ₹50 ಸಾವಿರವನ್ನು ಮಧ್ಯಂತರ ಪರಿಹಾರ ನೀಡುವುದಾಗಿ ಘೋಷಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇರಳದ ಕೋಯಿಕ್ಕೋಡ್ನಲ್ಲಿ ಕಳೆದ ವರ್ಷ ಏರ್ ಇಂಡಿಯಾ ಎಕ್ಸ್ಪ್ರೆಸ್ನ ವಿಮಾನ ಅಪಘಾತಕ್ಕೀಡಾದ ಘಟನೆಯಲ್ಲಿ ಗಾಯಗೊಂಡವರು ಹಾಗೂ ಮೃತರ ಕುಟುಂಬಗಳಿಗೆ ಅಂತಿಮ ಪರಿಹಾರವನ್ನು ವಿತರಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.</p>.<p>ಈ ದುರ್ಘಟನೆಯಲ್ಲಿ ಗಾಯಗೊಂಡಿದ್ದ 165 ಜನರ ಪೈಕಿ 80 ಜನರು ಪರಿಹಾರವನ್ನು ಸ್ವೀಕರಿಸಿದ್ದಾರೆ. ಮೃತಪಟ್ಟ 19 ಜನ ಪ್ರಯಾಣಿಕರ ಕುಟುಂಬಸ್ಥರು ಹಾಗೂ ಗಾಯಗೊಂಡವರ ಪೈಕಿ 85 ಜನರ ಕುಟುಂಬಗಳ ಸದಸ್ಯರು ಪರಿಹಾರ ಮೊತ್ತವನ್ನು ಸ್ವೀಕರಿಸಬೇಕಿದೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ತಿಳಿಸಿದೆ.</p>.<p>‘ಗಾಯಗೊಂಡವರು ಹಾಗೂ ಮೃತರ ಕುಟುಂಬದವರ ಪೈಕಿ ಯಾರೂ ಪರಿಹಾರವನ್ನು ತಿರಸ್ಕರಿಸಿಲ್ಲ. ಪರಿಹಾರಕ್ಕೆ ತಕರಾರು ಎತ್ತಿ ಯಾರೂ ಸಹ ಕೋರ್ಟ್ ಮೊರೆ ಹೋಗಿಲ್ಲ’ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ನ ವಕ್ತಾರ ತಿಳಿಸಿದ್ದಾರೆ.</p>.<p>ಕಳೆದ ವರ್ಷ ಆಗಸ್ಟ್ 7ರಂದು ದುಬೈಯಿಂದ ಬಂದಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು (ಐಎಕ್ಸ್ 1344) ಕೋಯಿಕ್ಕೋಡ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ವೇಯಿಂದ ಜಾರಿ ಸಮೀಪದ ಕಣಿವೆಗೆ ಬಿದ್ದು ಎರಡು ಹೋಳಾಗಿತ್ತು.</p>.<p>ಅಪಘಾತದಲ್ಲಿ 12 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನಮೃತಪಟ್ಟ ಪ್ರಯಾಣಿಕರ ಕುಟುಂಬದವರಿಗೆ ತಲಾ ₹10 ಲಕ್ಷ, 12 ವರ್ಷದ ಒಳಗಿನವರು ಮೃತಪಟ್ಟಿದ್ದರಿಗೆ ಅವರ ಕುಟುಂಬದವರಿಗೆ ತಲಾ ₹ 5 ಲಕ್ಷ ಮತ್ತು ತೀವ್ರವಾಗಿ ಗಾಯಗೊಂಡವರಿಗೆ ತಲಾ ₹2 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾಗಿರುವವರಿಗೆ ತಲಾ ₹50 ಸಾವಿರವನ್ನು ಮಧ್ಯಂತರ ಪರಿಹಾರ ನೀಡುವುದಾಗಿ ಘೋಷಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>