<p><strong>ಶ್ರೀನಗರ</strong>: ತಮ್ಮ ಮೇಲಿನ ಭಯೋತ್ಪಾದಕರ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಶ್ಮೀರ ತೊರೆಯುವಂತೆ ಕಾಶ್ಮೀರಿ ಪಂಡಿತ್ ಸಂಘರ್ಷ ಸಮಿತಿಯು(ಕೆಪಿಎಸ್ಎಸ್), ಸಮುದಾಯದ ಸದಸ್ಯರನ್ನು ಒತ್ತಾಯಿಸಿದೆ.</p>.<p>‘ಕಾಶ್ಮೀರಿ ಪಂಡಿತರ ಮೇಲೆ ಇಂದು ಮತ್ತೊಂದು ಮಾರಣಾಂತಿಕ ದಾಳಿ ನಡೆಸುವ ಮೂಲಕ ಕಾಶ್ಮೀರಿ ಕಣಿವೆಯ ಎಲ್ಲ ಕಾಶ್ಮೀರಿ ಪಂಡಿತರನ್ನು ಕೊಲ್ಲುವುದಾಗಿ ಭಯೋತ್ಪಾದಕರು ಸ್ಪಷ್ಟ ಸಂದೇಶ ನೀಡಿದ್ದಾರೆ’ಎಂದು ಕೆಪಿಎಸ್ಎಸ್ ಮುಖ್ಯಸ್ಥ ಸಂಜಯ್ ಟಿಕೂ ಹೇಳಿದ್ಧಾರೆ.</p>.<p>ಕಾಶ್ಮೀರಿ ಕಣಿವೆಯನ್ನು ಬಿಟ್ಟು ಜಮ್ಮು ಮತ್ತು ದೆಹಲಿಯಂತಹ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಟಿಕೂ ಅವರು ಎಲ್ಲ ಕಾಶ್ಮೀರಿ ಪಂಡಿತರಿಗೆ ಒತ್ತಾಯಿಸಿದ್ದಾರೆ.</p>.<p>‘ನಾವು ಇದನ್ನು ಕಳೆದ 32 ವರ್ಷಗಳಿಂದ ನೋಡುತ್ತಿದ್ದೇವೆ. ಅಲ್ಪಸಂಖ್ಯಾತರಿಗೆ, ಅದರಲ್ಲೂ ಕಾಶ್ಮೀರಿ ಪಂಡಿತರಿಗೆ ಭದ್ರತೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ನಾವು ಎಷ್ಟು ದಿನ ಹೀಗೇ ಸಾಯಬೇಕು? ಸಾಕು ಸಾಕು’ಎಂದು ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.</p>.<p>ಭಯೋತ್ಪಾದಕರು ಅಲ್ಪಸಂಖ್ಯಾತ ಸಮುದಾಯದ ಇನ್ನಷ್ಟು ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಬಹುದು ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಮಂಗಳವಾರ ದಾಳಿಗೀಡಾದ ಸಂತ್ರಸ್ತರು ಈ ಮೊದಲೇ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿದ್ದರು ಎಂದು ಕೆಪಿಎಸ್ಎಸ್ ಮುಖ್ಯಸ್ಥರು ತಿಳಿಸಿದ್ದಾರೆ.</p>.<p>‘ಆದರೆ, ಅಧಿಕಾರಿಗಳು ತಮ್ಮ ಹಳ್ಳಿಗಳಲ್ಲೇ ವಾಸಿಸುವಂತೆ ಅವರಿಗೆ ಹೇಳಿರುವುದು ವಿಪರ್ಯಾಸ. ಇಲ್ಲಿ ಏನು ಆಗುತ್ತಿದೆ? ಅಧಿಕಾರಿಗಳು ಸಂಭವನೀಯ ದಾಳಿಗಳ ಬಗ್ಗೆ ಮಾಹಿತಿ ಹೊಂದಿದ್ದಾರೆ. ಆದರೆ, ನಮಗೆ ಭದ್ರತೆ ನೀಡುತ್ತಿಲ್ಲ’ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಕಾಶ್ಮೀರಿ ಪಂಡಿತರನ್ನೇ ಉಗ್ರರು ಗುರಿಯಾಗಿಸಿಕೊಂಡಿರುವ ಬಗ್ಗೆ ಟಿಕೂ ಆಶ್ಚರ್ಯ ವ್ಯಕ್ತಪಡಿಸಿದರು.</p>.<p>‘ಸ್ವಾತಂತ್ರ್ಯ ದಿನಾಚರಣೆಯ ಪರೇಡ್ ಸಂದರ್ಭದಲ್ಲಿ ಅವರು ಏಕೆ ದಾಳಿ ಮಾಡಲಿಲ್ಲ? ಅಮರನಾಥ ಯಾತ್ರೆಯ ಮೇಲೆ ಏಕೆ ದಾಳಿ ನಡೆಯಲಿಲ್ಲ? ಕಾಶ್ಮೀರದಲ್ಲಿ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ. ಆದರೆ, ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಿರುವುದು ಹೇಗೆ?’ ಎಂದು ಅವರು ಪ್ರಶ್ನಿಸಿದ್ದಾರೆ.</p>.<p>ಕಾಶ್ಮೀರಿ ಪಂಡಿತರ ನಿರ್ಗಮನಕ್ಕೆ ಕರೆ ನೀಡಿದ ಪರಿಣಾಮದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಟಿಕೂ, ಅದನ್ನು ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ.</p>.<p>ಸರ್ಕಾರವು ಸಾರ್ವಜನಿಕ ಸುರಕ್ಷತಾ ಕಾಯಿದೆ (ಪಿಎಸ್ಎ) ಅಡಿಯಲ್ಲಿ ನನ್ನ ಮೇಲೆ ಪ್ರಕರಣ ದಾಖಲಿಸಬಹುದು ಎಂದು ಅವರು ಹೇಳಿದ್ದಾರೆ.</p>.<p>ಕಾಶ್ಮೀರದ ಶೋಫಿಯಾನ್ ಜಿಲ್ಲೆಯ ಚೋಟಿಪೊರಾ ಬಳಿ ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಸೇರಿದ ಸಹೋದರಿಬ್ಬರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಸುನಿಲ್ ಕುಮಾರ್ ಎಂಬುವವರು ಮೃತಪಟ್ಟಿದ್ದಾರೆ. ಅವರ ತಮ್ಮ ಪಿಂಟು ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಸೋಫಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಕಳೆದ ಮೇ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಬುಡ್ಗಾಂ ಜಿಲ್ಲೆಯ ಚದೂರ ತಹಶೀಲ್ ಕಚೇರಿಯಲ್ಲಿ ಉಗ್ರನೊಬ್ಬ ರಾಹುಲ್ ಭಟ್ ಎಂಬ ಕಾಶ್ಮೀರಿ ಪಂಡಿತರೊಬ್ಬರನ್ನು ಹತ್ಯೆಗೈದಿದ್ದ.</p>.<p>ಇದನ್ನೂ ಓದಿ..</p>.<p><a href="https://www.prajavani.net/india-news/kashmiripanditshot-dead-brother-injured-in-militant-attack-in-jk-963683.html" itemprop="url">ಕಾಶ್ಮೀರಿ ಪಂಡಿತ ಸಹೋದರರ ಮೇಲೆ ಉಗ್ರರ ದಾಳಿ: ಅಣ್ಣ ಸಾವು, ತಮ್ಮ ಆಸ್ಪತ್ರೆಗೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ತಮ್ಮ ಮೇಲಿನ ಭಯೋತ್ಪಾದಕರ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಶ್ಮೀರ ತೊರೆಯುವಂತೆ ಕಾಶ್ಮೀರಿ ಪಂಡಿತ್ ಸಂಘರ್ಷ ಸಮಿತಿಯು(ಕೆಪಿಎಸ್ಎಸ್), ಸಮುದಾಯದ ಸದಸ್ಯರನ್ನು ಒತ್ತಾಯಿಸಿದೆ.</p>.<p>‘ಕಾಶ್ಮೀರಿ ಪಂಡಿತರ ಮೇಲೆ ಇಂದು ಮತ್ತೊಂದು ಮಾರಣಾಂತಿಕ ದಾಳಿ ನಡೆಸುವ ಮೂಲಕ ಕಾಶ್ಮೀರಿ ಕಣಿವೆಯ ಎಲ್ಲ ಕಾಶ್ಮೀರಿ ಪಂಡಿತರನ್ನು ಕೊಲ್ಲುವುದಾಗಿ ಭಯೋತ್ಪಾದಕರು ಸ್ಪಷ್ಟ ಸಂದೇಶ ನೀಡಿದ್ದಾರೆ’ಎಂದು ಕೆಪಿಎಸ್ಎಸ್ ಮುಖ್ಯಸ್ಥ ಸಂಜಯ್ ಟಿಕೂ ಹೇಳಿದ್ಧಾರೆ.</p>.<p>ಕಾಶ್ಮೀರಿ ಕಣಿವೆಯನ್ನು ಬಿಟ್ಟು ಜಮ್ಮು ಮತ್ತು ದೆಹಲಿಯಂತಹ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಟಿಕೂ ಅವರು ಎಲ್ಲ ಕಾಶ್ಮೀರಿ ಪಂಡಿತರಿಗೆ ಒತ್ತಾಯಿಸಿದ್ದಾರೆ.</p>.<p>‘ನಾವು ಇದನ್ನು ಕಳೆದ 32 ವರ್ಷಗಳಿಂದ ನೋಡುತ್ತಿದ್ದೇವೆ. ಅಲ್ಪಸಂಖ್ಯಾತರಿಗೆ, ಅದರಲ್ಲೂ ಕಾಶ್ಮೀರಿ ಪಂಡಿತರಿಗೆ ಭದ್ರತೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ನಾವು ಎಷ್ಟು ದಿನ ಹೀಗೇ ಸಾಯಬೇಕು? ಸಾಕು ಸಾಕು’ಎಂದು ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.</p>.<p>ಭಯೋತ್ಪಾದಕರು ಅಲ್ಪಸಂಖ್ಯಾತ ಸಮುದಾಯದ ಇನ್ನಷ್ಟು ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಬಹುದು ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಮಂಗಳವಾರ ದಾಳಿಗೀಡಾದ ಸಂತ್ರಸ್ತರು ಈ ಮೊದಲೇ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿದ್ದರು ಎಂದು ಕೆಪಿಎಸ್ಎಸ್ ಮುಖ್ಯಸ್ಥರು ತಿಳಿಸಿದ್ದಾರೆ.</p>.<p>‘ಆದರೆ, ಅಧಿಕಾರಿಗಳು ತಮ್ಮ ಹಳ್ಳಿಗಳಲ್ಲೇ ವಾಸಿಸುವಂತೆ ಅವರಿಗೆ ಹೇಳಿರುವುದು ವಿಪರ್ಯಾಸ. ಇಲ್ಲಿ ಏನು ಆಗುತ್ತಿದೆ? ಅಧಿಕಾರಿಗಳು ಸಂಭವನೀಯ ದಾಳಿಗಳ ಬಗ್ಗೆ ಮಾಹಿತಿ ಹೊಂದಿದ್ದಾರೆ. ಆದರೆ, ನಮಗೆ ಭದ್ರತೆ ನೀಡುತ್ತಿಲ್ಲ’ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಕಾಶ್ಮೀರಿ ಪಂಡಿತರನ್ನೇ ಉಗ್ರರು ಗುರಿಯಾಗಿಸಿಕೊಂಡಿರುವ ಬಗ್ಗೆ ಟಿಕೂ ಆಶ್ಚರ್ಯ ವ್ಯಕ್ತಪಡಿಸಿದರು.</p>.<p>‘ಸ್ವಾತಂತ್ರ್ಯ ದಿನಾಚರಣೆಯ ಪರೇಡ್ ಸಂದರ್ಭದಲ್ಲಿ ಅವರು ಏಕೆ ದಾಳಿ ಮಾಡಲಿಲ್ಲ? ಅಮರನಾಥ ಯಾತ್ರೆಯ ಮೇಲೆ ಏಕೆ ದಾಳಿ ನಡೆಯಲಿಲ್ಲ? ಕಾಶ್ಮೀರದಲ್ಲಿ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ. ಆದರೆ, ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಿರುವುದು ಹೇಗೆ?’ ಎಂದು ಅವರು ಪ್ರಶ್ನಿಸಿದ್ದಾರೆ.</p>.<p>ಕಾಶ್ಮೀರಿ ಪಂಡಿತರ ನಿರ್ಗಮನಕ್ಕೆ ಕರೆ ನೀಡಿದ ಪರಿಣಾಮದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಟಿಕೂ, ಅದನ್ನು ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ.</p>.<p>ಸರ್ಕಾರವು ಸಾರ್ವಜನಿಕ ಸುರಕ್ಷತಾ ಕಾಯಿದೆ (ಪಿಎಸ್ಎ) ಅಡಿಯಲ್ಲಿ ನನ್ನ ಮೇಲೆ ಪ್ರಕರಣ ದಾಖಲಿಸಬಹುದು ಎಂದು ಅವರು ಹೇಳಿದ್ದಾರೆ.</p>.<p>ಕಾಶ್ಮೀರದ ಶೋಫಿಯಾನ್ ಜಿಲ್ಲೆಯ ಚೋಟಿಪೊರಾ ಬಳಿ ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಸೇರಿದ ಸಹೋದರಿಬ್ಬರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಸುನಿಲ್ ಕುಮಾರ್ ಎಂಬುವವರು ಮೃತಪಟ್ಟಿದ್ದಾರೆ. ಅವರ ತಮ್ಮ ಪಿಂಟು ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಸೋಫಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಕಳೆದ ಮೇ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಬುಡ್ಗಾಂ ಜಿಲ್ಲೆಯ ಚದೂರ ತಹಶೀಲ್ ಕಚೇರಿಯಲ್ಲಿ ಉಗ್ರನೊಬ್ಬ ರಾಹುಲ್ ಭಟ್ ಎಂಬ ಕಾಶ್ಮೀರಿ ಪಂಡಿತರೊಬ್ಬರನ್ನು ಹತ್ಯೆಗೈದಿದ್ದ.</p>.<p>ಇದನ್ನೂ ಓದಿ..</p>.<p><a href="https://www.prajavani.net/india-news/kashmiripanditshot-dead-brother-injured-in-militant-attack-in-jk-963683.html" itemprop="url">ಕಾಶ್ಮೀರಿ ಪಂಡಿತ ಸಹೋದರರ ಮೇಲೆ ಉಗ್ರರ ದಾಳಿ: ಅಣ್ಣ ಸಾವು, ತಮ್ಮ ಆಸ್ಪತ್ರೆಗೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>