ಇದೇ ವೇಳೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ದರ್ಶನ್ ಪಾಲ್ ಸಿಂಗ್, 'ಕಾಯ್ದೆಗಳಲ್ಲಿ ಏನಾದರೂ ಸಮಸ್ಯೆಗಳಿದ್ದರೆ ತಿದ್ದುಪಡಿ ಮಾಡುತ್ತೇವೆ ಎಂದು ನಮಗೆ ತೋಮರ್ ಹೇಳಿದ್ದರು. ಆದರೆ, ನಿನ್ನೆ(ಶುಕ್ರವಾರ) ರಾಜ್ಯಸಭೆಯಲ್ಲಿ ಮಾತನಾಡುವಾಗ ಕಾಯ್ದೆಗಳು ರೈತರ ಹಿತಾಸಕ್ತಿಗಳನ್ನು ಕಾಪಾಡಲಿವೆ ಎಂಬುದಾಗಿ ತಿಳಿಸಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ' ಎಂದು ಹರಿಹಾಯ್ದಿದ್ದಾರೆ.