ಉತ್ತರ ಕರ್ನಾಟಕ ಭಾಗದ ಶೇ 80ಕ್ಕೂ ಅಧಿಕ ರೈತರು ತಲಾ 2ರಿಂದ 3 ಎಕರೆ ಕೃಷಿ ಜಮೀನನ್ನು ಮಾತ್ರ ಹೊಂದಿದ್ದು, ಅವರ ಬಡತನ ಪರಿಗಣಿಸಿಯೇ ಕೇಂದ್ರದಲ್ಲಿದ್ದ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಆ ಭಾಗವನ್ನು ಅತ್ಯಂತ ಹಿಂದುಳಿದ ಪ್ರದೇಶ ಎಂದು ಘೋಷಿಸಿತ್ತು. ಅಲ್ಲದೆ, ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371(ಜೆ) ವಿಧಿ ಅಡಿ ವಿಶೇಷ ಸ್ಥಾನಮಾನ ನೀಡಿತ್ತು. ಅತ್ಯಂತ ಹಿಂದುಳಿದಿರುವ ಈ ಪ್ರದೇಶಗಳಿಗೆ ಈ ಯೋಜನೆಗಳಿಂದ ಪ್ರಯೋಜನವಾಗಲಿದೆ ಎಂದು ಅವರು ತಿಳಿಸಿದರು.