ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವನ್ನು ಮತ್ತೆ ರಚಿಸಲು ಡಿ.ವೈ. ಚಂದ್ರಚೂಡ್ ಅವರು ಒಪ್ಪಿಗೆ ನೀಡಿದ್ದಾರೆ. ಇದೇ ನ್ಯಾಯಮೂರ್ತಿಗಳಿದ್ದ ನ್ಯಾಯಪೀಠವು ಹಿಂದೆ ಕೃಷ್ಣಾ ಜಲನಯನ ಪ್ರದೇಶದ ರಾಜ್ಯಗಳಾದ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿತ್ತು.