ಅ.12ರಂದು ಎರಡೂ ದೇಶದ ಸೇನಾ ಅಧಿಕಾರಿಗಳ ಏಳನೇ ಸುತ್ತಿನ ಮಾತುಕತೆ ನಡೆದಿತ್ತು. ಈ ಸಭೆಯಲ್ಲಿ ಪ್ಯಾಂಗಾಂಗ್ ಸರೋವರದ ಸುತ್ತಮುತ್ತಲಿರುವ ಪ್ರಮುಖ ಪರ್ವತ ಪ್ರದೇಶಗಳಿಂದ ಭಾರತದ ಸೈನಿಕರು ಹಿಂದಕ್ಕೆ ಸರಿಯಬೇಕು ಎಂದು ಚೀನಾವು ಆಗ್ರಹಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಭಾರತ, ಘರ್ಷಣೆ ಸಂಭವಿಸಬಹುದಾದ ಪ್ರದೇಶಗಳಿಂದ ಎರಡೂ ದೇಶಗಳ ಸೈನಿಕರು ಏಕಕಾಲದಲ್ಲಿ ಹಿಂದೆಸರಿಯಬೇಕು ಎಂದು ಪ್ರತಿಪಾದಿಸಿತ್ತು. ಮಾತುಕತೆ ಮುಖಾಂತರವೇ ಒಮ್ಮತವಾದ ಪರಿಹಾರ ಕಂಡುಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿತ್ತು.