ಆದರೆ,ಲಖಿಂಪುರ ಖೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜಿವ್ ಸುಮನ್, ‘ಪ್ರಾಥಮಿಕ ತನಿಖೆಯ ಪ್ರಕಾರ, ಬಾಲಕಿಯರಿಬ್ಬರೂ ಬುಧವಾರ ಮಧ್ಯಾಹ್ನತಮ್ಮ ಮನೆಯಿಂದ ಹೊರಟು, ಆರೋಪಿಗಳಾದ ಜುನೈದ್ ಮತ್ತು ಸೊಹೈಲ್ ಜತೆಗೆ ಹೋಗಿದ್ದಾರೆ. ಇಬ್ಬರು ಆರೋಪಿಗಳು ಬಾಲಕಿಯರೊಂದಿಗೆ ಸಂಬಂಧ ಹೊಂದಿದ್ದರು. ಮದುವೆಗೆಬಾಲಕಿಯರು ಒತ್ತಾಯಿಸಿದ್ದರಿಂದ ಆರೋಪಿಗಳು ಕತ್ತು ಹಿಸುಕಿ ಕೊಂದಿದ್ದಾರೆ’ ಎಂದು ಸುದ್ದಿಗಾರರಿಗೆ ತಿಳಿಸಿದ್ದರು.