ಲಖನೌ: ಉತ್ತರ ಪ್ರದೇಶದ ಲಖಿಂಪುರ್–ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಅವರು ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಅಲಹಾಬಾದ್ ಹೈಕೋರ್ಟ್ನ ಲಖನೌ ಪೀಠವು ಅವರಿಗೆ ಜಾಮೀನು ನೀಡಿತ್ತು. ಇಬ್ಬರಿಂದ ₹ 3 ಲಕ್ಷ ಮೌಲ್ಯದ ಜಾಮೀನಿನ ಬಾಂಡ್ ಪಡೆದು ಆಶಿಶ್ ಮಿಶ್ರಾ ಅವರನ್ನು ಬಿಡುಗಡೆ ಮಾಡಲಾಗಿದೆ.