ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು, ರಾಜ್ಯ ಸರ್ಕಾರ ನೀಡಿದ ಐಪಿಎಸ್ ಅಧಿಕಾರಿಗಳ ಹೆಸರನ್ನು ಪರಿಗಣಿಸಿ ಅದರಲ್ಲಿ ಮೂವರು ಅಧಿಕಾರಿಗಳನ್ನು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡದ ಭಾಗವಾಗಿ ನೇಮಿಸಿತು. ಈ ಕುರಿತುಶೀಘ್ರದಲ್ಲೇ ವಿವರವಾದ ಆದೇಶವನ್ನು ಹೊರಡಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ತಿಳಿಸಿದರು.