ಜೈಪುರ: ಉತ್ತರ ಪ್ರದೇಶದ ಲಖಿಂಪುರದಲ್ಲಿ ಸಂಭವಿಸಿದ ಹಿಂಸಾಚಾರ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಲು ಮುಂದಾಗಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಸೀತಾಪುರದಲ್ಲಿ ಬಂಧನದಲ್ಲಿದ್ದು, ಅವರನ್ನು ಭೇಟಿ ಮಾಡುವ ಸಲುವಾಗಿ ಹಿರಿಯ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಬುಧವಾರ ಸೀತಾಪುರದತ್ತ ಹೊರಟಿದ್ದಾರೆ.