<p><strong>ಚಂಡೀಗಡ:</strong> ನವಜೋತ್ ಸಿಂಗ್ ಸಿಧು ಸೇರಿ ಪಂಜಾಬ್ ಕಾಂಗ್ರೆಸ್ನ ಹಲವು ಮುಖಂಡರನ್ನು ಲಖಿಂಪುರ–ಖೇರಿಗೆ ಹೋಗುವ ದಾರಿಯಲ್ಲಿ ಸಹರಣಪುರದಲ್ಲಿ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.</p>.<p>ಪಂಜಾಬ್ನ ಕೆಲವು ಸಚಿವರು, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಮೊಹಾಲಿಯಲ್ಲಿ ಗುರುವಾರ ಜಮಾಯಿಸಿದರು. ನಂತರ ಅವರು ಸಿಧು ನೇತೃತ್ವದಲ್ಲಿ ಲಖಿಂಪುರ–ಖೇರಿಯತ್ತ ಸಾಗಿದರು. ಆದರೆ, ಹರಿಯಾಣ–ಉತ್ತರ ಪ್ರದೇಶ ಗಡಿಯಲ್ಲಿ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿದ್ದರು. ಪೊಲೀಸರು ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>ಲಖಿಂಪುರ–ಖೇರಿಗೆ ಐವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇದೆ ಎಂದು ಪೊಲೀಸರು ವಾದಿಸಿದರು. ಆದರೆ, ಸಚಿವರು ಮತ್ತು ಶಾಸಕರಿಗೆ ಅವಕಾಶ ಕೊಡಲೇಬೇಕು ಎಂದು ಸಿಧು ಪಟ್ಟು ಹಿಡಿದರು. ಪೊಲೀಸರು ಒಪ್ಪಲಿಲ್ಲ. ಸಿಧು ಮತ್ತು ಇತರ ಮುಖಂಡರನ್ನು ಪೊಲೀಶರು ವಶಕ್ಕೆ ಪಡೆದರು.</p>.<p><strong>ಬಿಜೆಪಿ ಮುಖಂಡರ ಕಾರು ರೈತನಿಗೆ ಡಿಕ್ಕಿ</strong></p>.<p><strong>ಅಂಬಾಲಾ</strong>: ಬಿಜೆಪಿ ಮುಖಂಡರು ಸಂಚರಿಸುತ್ತಿದ್ದ ಕಾರು ಅಂಬಾಲಾ ಸಮೀಪ ನಾರಾಯಣಗಡ ಎಂಬಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಡಿಕ್ಕಿ ಹೊಡೆದಿದೆ. ಬಿಜೆಪಿ ಸಂಸದನಾಯಬ್ ಸಿಂಗ್ ಸೈನಿ ಮತ್ತು ಹರಿಯಾಣದ ಕ್ರೀಡಾ ಸಚಿವ ಸಂದೀಪ್ ಸಿಂಗ್ ಅವರು ಕಾರಿನಲ್ಲಿ ಸಂಚರಿಸುತ್ತಿದ್ದರು.</p>.<p>ಬಿಜೆಪಿ ಮುಖಂಡರ ಕಾರು ಭವನ್ ಪ್ರೀತ್ ಎಂಬ ರೈತನಿಗೆ ಡಿಕ್ಕಿ ಹೊಡೆದಿದೆ. ಅವರ ಕಾಲಿಗೆ ಗಾಯ ಆಗಿದೆ ಎಂದು ಪ್ರತಿಭಟನೆನಿತರ ರೈತರು ಹೇಳಿದ್ದಾರೆ. ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ನವಜೋತ್ ಸಿಂಗ್ ಸಿಧು ಸೇರಿ ಪಂಜಾಬ್ ಕಾಂಗ್ರೆಸ್ನ ಹಲವು ಮುಖಂಡರನ್ನು ಲಖಿಂಪುರ–ಖೇರಿಗೆ ಹೋಗುವ ದಾರಿಯಲ್ಲಿ ಸಹರಣಪುರದಲ್ಲಿ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.</p>.<p>ಪಂಜಾಬ್ನ ಕೆಲವು ಸಚಿವರು, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಮೊಹಾಲಿಯಲ್ಲಿ ಗುರುವಾರ ಜಮಾಯಿಸಿದರು. ನಂತರ ಅವರು ಸಿಧು ನೇತೃತ್ವದಲ್ಲಿ ಲಖಿಂಪುರ–ಖೇರಿಯತ್ತ ಸಾಗಿದರು. ಆದರೆ, ಹರಿಯಾಣ–ಉತ್ತರ ಪ್ರದೇಶ ಗಡಿಯಲ್ಲಿ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿದ್ದರು. ಪೊಲೀಸರು ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>ಲಖಿಂಪುರ–ಖೇರಿಗೆ ಐವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇದೆ ಎಂದು ಪೊಲೀಸರು ವಾದಿಸಿದರು. ಆದರೆ, ಸಚಿವರು ಮತ್ತು ಶಾಸಕರಿಗೆ ಅವಕಾಶ ಕೊಡಲೇಬೇಕು ಎಂದು ಸಿಧು ಪಟ್ಟು ಹಿಡಿದರು. ಪೊಲೀಸರು ಒಪ್ಪಲಿಲ್ಲ. ಸಿಧು ಮತ್ತು ಇತರ ಮುಖಂಡರನ್ನು ಪೊಲೀಶರು ವಶಕ್ಕೆ ಪಡೆದರು.</p>.<p><strong>ಬಿಜೆಪಿ ಮುಖಂಡರ ಕಾರು ರೈತನಿಗೆ ಡಿಕ್ಕಿ</strong></p>.<p><strong>ಅಂಬಾಲಾ</strong>: ಬಿಜೆಪಿ ಮುಖಂಡರು ಸಂಚರಿಸುತ್ತಿದ್ದ ಕಾರು ಅಂಬಾಲಾ ಸಮೀಪ ನಾರಾಯಣಗಡ ಎಂಬಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಡಿಕ್ಕಿ ಹೊಡೆದಿದೆ. ಬಿಜೆಪಿ ಸಂಸದನಾಯಬ್ ಸಿಂಗ್ ಸೈನಿ ಮತ್ತು ಹರಿಯಾಣದ ಕ್ರೀಡಾ ಸಚಿವ ಸಂದೀಪ್ ಸಿಂಗ್ ಅವರು ಕಾರಿನಲ್ಲಿ ಸಂಚರಿಸುತ್ತಿದ್ದರು.</p>.<p>ಬಿಜೆಪಿ ಮುಖಂಡರ ಕಾರು ಭವನ್ ಪ್ರೀತ್ ಎಂಬ ರೈತನಿಗೆ ಡಿಕ್ಕಿ ಹೊಡೆದಿದೆ. ಅವರ ಕಾಲಿಗೆ ಗಾಯ ಆಗಿದೆ ಎಂದು ಪ್ರತಿಭಟನೆನಿತರ ರೈತರು ಹೇಳಿದ್ದಾರೆ. ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>