<p><strong>ನವದೆಹಲಿ</strong>: ಲಖಿಂಪುರ–ಖೇರಿಯಲ್ಲಿ ಕಳೆದ ಭಾನುವಾರ ನಡೆದ ‘ಎಂಟು ಮಂದಿಯ ಕೊಲೆ’ ಪ್ರಕರಣದ ಆರೋಪಿ ಗಳು ಯಾರು ಮತ್ತು ಅವರನ್ನು ಬಂಧಿಸ ಲಾಗಿದೆಯೇ ಎಂಬ ಮಾಹಿತಿ ಇರುವ ಸ್ಥಿತಿಗತಿ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.</p>.<p>ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಶುಕ್ರವಾರದ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.</p>.<p>‘ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ಯಾರ ಮೇಲೆ ಎಫ್ಐಆರ್ ದಾಖಲಿಸಲಾ<br />ಗಿದೆ, ಅವರನ್ನು ಬಂಧಿಸಲಾಗಿದೆಯೇ ಎಂಬ ಮಾಹಿತಿ ಬೇಕಾಗಿದೆ’ ಎಂದು ಉತ್ತರ ಪ್ರದೇಶದ ಪರವಾಗಿ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಅವರಿಗೆ ಪೀಠವು ಹೇಳಿತು. </p>.<p>ಭಾನುವಾರ ನಡೆದ ಎಂಟು ಮಂದಿಯ ಹತ್ಯೆಗೆ ಸಂಬಂಧಿಸಿ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ಬುಧವಾರ ದೂರು ದಾಖಲಿಸಿಕೊಂಡಿತು. ಇದನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸುವಂತೆ ರಿಜಿಸ್ಟ್ರಿಗೆ ತಿಳಿಸಿದೆ. ವಕೀಲರಾದ ಶಿವಕುಮಾರ್ ತ್ರಿಪಾಠಿ ಮತ್ತು ಸಿ.ಎಸ್. ಪಂಡಾ ಅವರು ಪ್ರಕರಣದ ಬಗ್ಗೆ ಅರ್ಜಿಯೊಂದನ್ನು ಸಲ್ಲಿಸಿದ್ದರು. ಈ ಅರ್ಜಿಯಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸಲಾಗಿದೆ. ವಿಚಾರಣೆ ಶುಕ್ರವಾರ ಮುಂದುವರಿಯಲಿದೆ.</p>.<p><strong>‘ತಾಯಿಗೆ ಚಿಕಿತ್ಸೆ ಕೊಡಿ’</strong></p>.<p>ಮೃತ ರೈತ ಲವ್ಪ್ರೀತ್ ಸಿಂಗ್ ಅವರ ತಾಯಿಗೆ ತಕ್ಷಣ ಚಿಕಿತ್ಸೆ ಕೊಡಿಸಬೇಕಾಗಿದೆ. ಈ ಚಿಕಿತ್ಸೆಗೆ ನೆರವಾಗುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಎಂದು ವಕೀಲರಾದ ಅಮೃತಪಾಲ್ ಸಿಂಗ್ ಖಾಲ್ಸಾ ವಿಚಾರಣೆ ಸಂದರ್ಭ ದಲ್ಲಿ ಕೋರಿದರು. ಮಗನನ್ನು ಕಳೆದುಕೊಂಡ ತಾಯಿಯು ಆಘಾತಗೊಂಡಿದ್ದಾರೆ ಎಂದರು.</p>.<p>ಈ ವಿಚಾರವನ್ನು ತಕ್ಷಣವೇ ರಾಜ್ಯ ಸರ್ಕಾರದ ಗಮನಕ್ಕೆ ತನ್ನಿ. ಅಗತ್ಯ ವೈದ್ಯಕೀಯ ನೆರವು ಸಿಗುವಂತೆ ನೋಡಿಕೊಳ್ಳಿ ಎಂದು ಪೀಠವು ಗರಿಮಾ ಪ್ರಸಾದ್ ಅವರಿಗೆ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲಖಿಂಪುರ–ಖೇರಿಯಲ್ಲಿ ಕಳೆದ ಭಾನುವಾರ ನಡೆದ ‘ಎಂಟು ಮಂದಿಯ ಕೊಲೆ’ ಪ್ರಕರಣದ ಆರೋಪಿ ಗಳು ಯಾರು ಮತ್ತು ಅವರನ್ನು ಬಂಧಿಸ ಲಾಗಿದೆಯೇ ಎಂಬ ಮಾಹಿತಿ ಇರುವ ಸ್ಥಿತಿಗತಿ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.</p>.<p>ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಶುಕ್ರವಾರದ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.</p>.<p>‘ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ಯಾರ ಮೇಲೆ ಎಫ್ಐಆರ್ ದಾಖಲಿಸಲಾ<br />ಗಿದೆ, ಅವರನ್ನು ಬಂಧಿಸಲಾಗಿದೆಯೇ ಎಂಬ ಮಾಹಿತಿ ಬೇಕಾಗಿದೆ’ ಎಂದು ಉತ್ತರ ಪ್ರದೇಶದ ಪರವಾಗಿ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಅವರಿಗೆ ಪೀಠವು ಹೇಳಿತು. </p>.<p>ಭಾನುವಾರ ನಡೆದ ಎಂಟು ಮಂದಿಯ ಹತ್ಯೆಗೆ ಸಂಬಂಧಿಸಿ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ಬುಧವಾರ ದೂರು ದಾಖಲಿಸಿಕೊಂಡಿತು. ಇದನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸುವಂತೆ ರಿಜಿಸ್ಟ್ರಿಗೆ ತಿಳಿಸಿದೆ. ವಕೀಲರಾದ ಶಿವಕುಮಾರ್ ತ್ರಿಪಾಠಿ ಮತ್ತು ಸಿ.ಎಸ್. ಪಂಡಾ ಅವರು ಪ್ರಕರಣದ ಬಗ್ಗೆ ಅರ್ಜಿಯೊಂದನ್ನು ಸಲ್ಲಿಸಿದ್ದರು. ಈ ಅರ್ಜಿಯಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸಲಾಗಿದೆ. ವಿಚಾರಣೆ ಶುಕ್ರವಾರ ಮುಂದುವರಿಯಲಿದೆ.</p>.<p><strong>‘ತಾಯಿಗೆ ಚಿಕಿತ್ಸೆ ಕೊಡಿ’</strong></p>.<p>ಮೃತ ರೈತ ಲವ್ಪ್ರೀತ್ ಸಿಂಗ್ ಅವರ ತಾಯಿಗೆ ತಕ್ಷಣ ಚಿಕಿತ್ಸೆ ಕೊಡಿಸಬೇಕಾಗಿದೆ. ಈ ಚಿಕಿತ್ಸೆಗೆ ನೆರವಾಗುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಎಂದು ವಕೀಲರಾದ ಅಮೃತಪಾಲ್ ಸಿಂಗ್ ಖಾಲ್ಸಾ ವಿಚಾರಣೆ ಸಂದರ್ಭ ದಲ್ಲಿ ಕೋರಿದರು. ಮಗನನ್ನು ಕಳೆದುಕೊಂಡ ತಾಯಿಯು ಆಘಾತಗೊಂಡಿದ್ದಾರೆ ಎಂದರು.</p>.<p>ಈ ವಿಚಾರವನ್ನು ತಕ್ಷಣವೇ ರಾಜ್ಯ ಸರ್ಕಾರದ ಗಮನಕ್ಕೆ ತನ್ನಿ. ಅಗತ್ಯ ವೈದ್ಯಕೀಯ ನೆರವು ಸಿಗುವಂತೆ ನೋಡಿಕೊಳ್ಳಿ ಎಂದು ಪೀಠವು ಗರಿಮಾ ಪ್ರಸಾದ್ ಅವರಿಗೆ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>