ನವದೆಹಲಿ: ಕಳೆದ ವರ್ಷದ ಅಕ್ಟೋಬರ್ 3ರಂದು ಉತ್ತರ ಪ್ರದೇಶದಲಖೀಂಪುರ ಖೇರಿ ಜಿಲ್ಲೆಯ ಟಿಕುನಿಯಾ ಗ್ರಾಮದಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ವಿರೋಧ ಪಕ್ಷಗಳು ಹಾಗೂ ರೈತ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ಕಿಡಿಕಾರಿವೆ.