ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಹಿಮಾಕೊಹ್ಲಿ ಅವರಿದ್ದ ನ್ಯಾಯಪೀಠವು, ‘ನಾವು ಜಾಮೀನು ಅರ್ಜಿಯನ್ನು ಪರಿಶೀಲಿಸುತ್ತಿದ್ದೇವೆ. ನ್ಯಾಯಮೂರ್ತಿಯು ಮರಣೋತ್ತರ ವರದಿಯನ್ನು ಪರಿಶೀಲಿಸುವುದು ಹೇಗೆ ಸಾಧ್ಯ. ಜಾಮೀನು ಅರ್ಜಿ ಕಾರಣಕ್ಕೆ ಪ್ರಕರಣ, ಗಾಯ ಇತ್ಯಾದಿ ವಿವರಣೆ ಗಮನಿಸುವುದು ಅನಗತ್ಯ’ ಎಂದು ಅಭಿಪ್ರಾಯಪಟ್ಟಿತು.