ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಖಿಂಪುರ ಹಿಂಸಾಚಾರ:ಆಶಿಷ್‌ ಮಿಶ್ರಾರನ್ನು ವಿಚಾರಣೆಗೆ ಕರೆದೊಯ್ದ ಪೊಲೀಸರು

Last Updated 12 ಅಕ್ಟೋಬರ್ 2021, 10:08 IST
ಅಕ್ಷರ ಗಾತ್ರ

ಲಖಿಂಪುರ ಖೇರಿ(ಉತ್ತರ ಪ್ರದೇಶ): ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರ ಗೃಹ ಖಾತೆ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಷ್‌ ಅವರನ್ನು ಮಂಗಳವಾರ ವಿಚಾರಣೆಗಾಗಿ ಕ್ರೈಂ ಬ್ರಾಂಚ್ ಕಚೇರಿಗೆ ಕರೆತರಲಾಯಿತು.

ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್‌ ಚಿಂತರಾಮ್ ಅವರು ಸೋಮವಾರ ಆಶಿಷ್‌ ಅವರನ್ನು ವಿಚಾರಣೆಗಾಗಿ ಮೂರು ದಿನಗಳ ಪೊಲೀಸ್ ವಶಕ್ಕೆ ನೀಡಿದ ಒಂದು ದಿನದ ನಂತರ, ಮಂಗಳವಾರ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಕ್ರೈ ಬ್ರಾಂಚ್ ಕಚೇರಿಗೆ ಕರೆತರಲಾಗಿದೆ.

ಲಖಿಂಪುರ ಖೇರಿಯಲ್ಲಿ ಅ.3 ರಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಹತ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಆಶಿಷ್‌ ಅವರನ್ನು ಬಂಧಿಸಲಾಗಿತ್ತು.

ಪೊಲೀಸರು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೇಳಿದ್ದರು. ಆದರೆ ನ್ಯಾಯಾಲಯ ಅ.12ರಿಂದ ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿತು. ಅ.15ಕ್ಕೆ ಆ ಅವಧಿ ಮುಗಿಯಲಿದೆ ಎಂದು ಹಿರಿಯ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಒ) ಎಸ್ ಪಿ ಯಾದವ್ ಸುದ್ದಿಗಾರರಿಗೆ ತಿಳಿಸಿದರು.‌

ಆಶಿಷ್‌ರನ್ನು ಶನಿವಾರ ಬಂಧಿಸುವ ಮುನ್ನ ಕ್ರೈಂ ಬ್ರಾಂಚ್‌ ಕಚೇರಿಯಲ್ಲಿ 12 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ಪ್ರಕರಣದ ತನಿಖೆಗಾಗಿರಾಜ್ಯ ಸರ್ಕಾರ ಈಗ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಮುಂದೆ ಈ ತಂಡ ಆಶಿಷ್‌ ಅವರ ವಿಚಾರಣೆ ನಡೆಸಲಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT