ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಜಯ್ ಮಿಶ್ರಾ ವಜಾಕ್ಕೆ ಆಗ್ರಹ, ದೇಶದಾದ್ಯಂತ ಆಂದೋಲನದ ಎಚ್ಚರಿಕೆ ನೀಡಿದ ಟಿಕಾಯತ್

Last Updated 6 ಅಕ್ಟೋಬರ್ 2021, 14:34 IST
ಅಕ್ಷರ ಗಾತ್ರ

ಲಖಿಂಪುರ ಖೇರಿ: ‘ಉತ್ತರ ಪ್ರದೇಶದ ಲಖಿಂಪುರ ಘಟನೆಗೆ ಸಂಬಂಧಿಸಿ ಕೇಂದ್ರದ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಅವರು ರಾಜೀನಾಮೆ ನೀಡಬೇಕು’ ಎಂದು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಆಗ್ರಹಿಸಿದ್ದಾರೆ.

ಎಲ್ಲ ಆರೋಪಿಗಳನ್ನು ಬಂಧಿಸಬೇಕು. ರೈತರ ಜತೆ ಸರ್ಕಾರ ಮಾಡಿಕೊಂಡಿರುವ ಎಲ್ಲ ಒಪ್ಪಂದಗಳನ್ನು ಒಂದು ವಾರದ ಒಳಗೆ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ದೇಶದಾದ್ಯಂತ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರ ಪೈಕಿ ಪ್ರಮುಖರಾಗಿರುವ ಟಿಕಾಯತ್, ಸರ್ಕಾರಿ ಅಧಿಕಾರಿಗಳ ಜತೆ ಅಕ್ಟೋಬರ್ 4ರಂದು ರೈತರು ಮಾಡಿಕೊಂಡ ಒಪ್ಪಂದದ ನೇತೃತ್ವ ವಹಿಸಿದ್ದರು. ಈ ಒಪ್ಪಂದದ ಬಳಿಕ ರೈತರು ಪ್ರತಿಭಟನೆ ನಿಲ್ಲಿಸಿದ್ದರು. ಅಲ್ಲದೆ, ಮೃತ ರೈತರ ಮರಣೋತ್ತರ ಪರೀಕ್ಷೆಗೆ ಅವರ ಕುಟುಂಬದವರು ಸಮ್ಮತಿಸಿದ್ದರು.

ಒಮ್ಮತಕ್ಕೆ ಬಂದ ಬಳಿಕ ಮೃತ ರೈತರ ಕುಟುಂಬದವರಿಗೆ ₹45 ಲಕ್ಷ ಪರಿಹಾರ ನೀಡಲಾಗುವುದು ಮತ್ತು ಹೈಕೋರ್ಟ್ ಜಡ್ಜ್‌ ಅಧೀನದಲ್ಲಿ ನ್ಯಾಯಾಂಗ ತನಿಖೆ ನಡೆಸಲಾಗುವುದು ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಟಿಕಾಯತ್ ಸಮ್ಮುಖದಲ್ಲಿ ತಿಳಿಸಿದ್ದರು.

‘ನಮ್ಮ ಪ್ರತಿಭಟನೆ ಕೊನೆಗೊಂಡಿಲ್ಲ. ಒಪ್ಪಂದ ಮಾಡಿಕೊಂಡಿರುವುದನ್ನು ಜಾರಿಗೊಳಿಸುತ್ತಾರೆಯೇ ಎಂದು 8 ದಿನಗಳ ಕಾಲ ಕಾದು ನೋಡಲಿದ್ದೇವೆ. ಜಾರಿಗೊಳಿಸದಿದ್ದಲ್ಲಿ ದೇಶದಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಟಿಕಾಯತ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT