ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಯುಕ್ತ ಕಿಸಾನ್‌ ಮೋರ್ಚಾದಿಂದ ಯೋಗೇಂದ್ರ ಯಾದವ್‌ ಅಮಾನತು

Last Updated 21 ಅಕ್ಟೋಬರ್ 2021, 19:22 IST
ಅಕ್ಷರ ಗಾತ್ರ

ನವದೆಹಲಿ: ಲಖಿಂಪುರ–ಖೇರಿ ಹಿಂಸಾಚಾರದಲ್ಲಿ ಕೊಲೆಯಾದ ಬಿಜೆಪಿ ಕಾರ್ಯಕರ್ತರೊಬ್ಬರ ಕುಟುಂಬವನ್ನು ಭೇಟಿ ಮಾಡಿದ ಕಾರಣಕ್ಕೆ ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್‌ ಅವರನ್ನು ತಿಂಗಳ ಅವಧಿಗೆ ಸಂಯುಕ್ತ ಕಿಸಾನ್‌ ಮೋರ್ಚಾದಿಂದ (ಎಸ್‌ಕೆಎಂ) ಗುರುವಾರ ಅಮಾನತು ಮಾಡಲಾಗಿದೆ.

‘ಎಸ್‌ಕೆೆಎಂನ ಸಾಮಾನ್ಯಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಎಸ್‌ಕೆಎಂನ ಸಭೆಗಳು ಹಾಗೂ ಹೋರಾಟಗಳಲ್ಲಿ ಯಾದವ್‌ ಪಾಲ್ಗೊಳ್ಳುವಂತಿಲ್ಲ’ ಎಂದು ಹಿರಿಯ ರೈತ ಮುಖಂಡರೊಬ್ಬರು ಸಭೆ ನಂತರ ತಿಳಿಸಿದರು.

ಯಾದವ್‌ ಕೂಡ ಈ ಸಾಮಾನ್ಯಸಭೆಯಲ್ಲಿ ಪಾಲ್ಗೊಂಡಿದ್ದರು. ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಎಸ್‌ಕೆಎಂ ಪ್ರತಿಭಟನೆ ನಡೆಸುತ್ತಿದ್ದು, ಯಾದವ್‌ ಅವರು ಎಸ್‌ಕೆಎಂ ಕೋರ್‌ ಕಮಿಟಿ ಸದಸ್ಯರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT