<p><strong>ನವದೆಹಲಿ:</strong> ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣವು ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಾನಿಯುಂಟು ಮಾಡಬಹುದು ಎಂದು ‘ಎಬಿಪಿ–ಸಿವೋಟರ್ ಮತ್ತು ಐಎಎನ್ಸ್’ ಸಮೀಕ್ಷೆ ಹೇಳಿದೆ.</p>.<p>ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಈ ವಿಷಯವು ಹಾನಿ ಉಂಟುಮಾಡುತ್ತದೆ ಎಂದು ಶೇ 62 ರಷ್ಟು ಮತದಾರರು ಭಾವಿಸಿದರೆ, ಶೇ 21.5 ರಷ್ಟು ಜನರು ಬಿಜೆಪಿಗೆ ಇದು ನೆರವಾಗುತ್ತದೆ ಎಂದು ಭಾವಿಸಿದ್ದಾರೆ. ಶೇ 16 ರಷ್ಟು ಜನರು ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ 9 ವೈದ್ಯಕೀಯ ಕಾಲೇಜುಗಳು ಯೋಗಿ ಸರ್ಕಾರಕ್ಕೆ ಚುನಾವಣೆಯಲ್ಲಿ ಲಾಭ ತಂದುಕೊಡಲಿವೆ ಎಂದು ಸಮೀಕ್ಷೆಯು ಹೇಳುತ್ತಿದೆ. ಏಕೆಂದರೆ, ಶೇ 58.8 ಮತದಾರರು ಇದನ್ನು ಒಪ್ಪಿಕೊಂಡಿದ್ದಾರೆ. ಆದರೆ, ಶೇ 48.2 ಜನರು ಇದರಿಂದ ಸರ್ಕಾರಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದಿದ್ದಾರೆ.</p>.<p>ಆದರೆ, ರಾಜ್ಯದಲ್ಲಿ ನಡೆದಿರುವ ದಾಖಲೆಯ ಮಟ್ಟದ ಲಸಿಕೀಕರಣ ಅಭಿಯಾನವು ಶೇ 56 ಜನರಿಗೆ ವಿಶೇಷವೆಂಬಂತೆ ಕಂಡಿಲ್ಲ. 44.3 ರಷ್ಟು ಜನರು ಇದು ಮತದಾರರ ಮೇಲೆ ಪರಿಣಾಮ ಬೀರುತ್ತದೆ ಎಂದು ಭಾವಿಸಿದ್ದಾರೆ.</p>.<p>ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿಯವರ ಸಕ್ರಿಯ ಪಾತ್ರದಿಂದ ಕಾಂಗ್ರೆಸ್ಗೆ ಲಾಭವಾಗಲಿದೆಯೇ ಎಂಬ ಪ್ರಶ್ನೆಗೆ, ಇಲ್ಲ ಎಂದು ಶೇ 52.8ರಷ್ಟು ಮತದಾರರು ಹೇಳಿದ್ದಾರೆ. ಶೇಕಡಾ 47.2 ರಷ್ಟು ಜನರು ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.</p>.<p>ರಾಜ್ಯದ ಎಲ್ಲಾ 403 ವಿಧಾನಸಭಾ ಕ್ಷೇತ್ರಗಳ 3,571 ಜನರನ್ನು ಸಮೀಕ್ಷೆಗಾಗಿ ಸಂಪರ್ಕಿಸಲಾಗಿತ್ತು ಎಂದು ಸಮೀಕ್ಷಾ ಸಂಸ್ಥೆಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣವು ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಾನಿಯುಂಟು ಮಾಡಬಹುದು ಎಂದು ‘ಎಬಿಪಿ–ಸಿವೋಟರ್ ಮತ್ತು ಐಎಎನ್ಸ್’ ಸಮೀಕ್ಷೆ ಹೇಳಿದೆ.</p>.<p>ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಈ ವಿಷಯವು ಹಾನಿ ಉಂಟುಮಾಡುತ್ತದೆ ಎಂದು ಶೇ 62 ರಷ್ಟು ಮತದಾರರು ಭಾವಿಸಿದರೆ, ಶೇ 21.5 ರಷ್ಟು ಜನರು ಬಿಜೆಪಿಗೆ ಇದು ನೆರವಾಗುತ್ತದೆ ಎಂದು ಭಾವಿಸಿದ್ದಾರೆ. ಶೇ 16 ರಷ್ಟು ಜನರು ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ 9 ವೈದ್ಯಕೀಯ ಕಾಲೇಜುಗಳು ಯೋಗಿ ಸರ್ಕಾರಕ್ಕೆ ಚುನಾವಣೆಯಲ್ಲಿ ಲಾಭ ತಂದುಕೊಡಲಿವೆ ಎಂದು ಸಮೀಕ್ಷೆಯು ಹೇಳುತ್ತಿದೆ. ಏಕೆಂದರೆ, ಶೇ 58.8 ಮತದಾರರು ಇದನ್ನು ಒಪ್ಪಿಕೊಂಡಿದ್ದಾರೆ. ಆದರೆ, ಶೇ 48.2 ಜನರು ಇದರಿಂದ ಸರ್ಕಾರಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದಿದ್ದಾರೆ.</p>.<p>ಆದರೆ, ರಾಜ್ಯದಲ್ಲಿ ನಡೆದಿರುವ ದಾಖಲೆಯ ಮಟ್ಟದ ಲಸಿಕೀಕರಣ ಅಭಿಯಾನವು ಶೇ 56 ಜನರಿಗೆ ವಿಶೇಷವೆಂಬಂತೆ ಕಂಡಿಲ್ಲ. 44.3 ರಷ್ಟು ಜನರು ಇದು ಮತದಾರರ ಮೇಲೆ ಪರಿಣಾಮ ಬೀರುತ್ತದೆ ಎಂದು ಭಾವಿಸಿದ್ದಾರೆ.</p>.<p>ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿಯವರ ಸಕ್ರಿಯ ಪಾತ್ರದಿಂದ ಕಾಂಗ್ರೆಸ್ಗೆ ಲಾಭವಾಗಲಿದೆಯೇ ಎಂಬ ಪ್ರಶ್ನೆಗೆ, ಇಲ್ಲ ಎಂದು ಶೇ 52.8ರಷ್ಟು ಮತದಾರರು ಹೇಳಿದ್ದಾರೆ. ಶೇಕಡಾ 47.2 ರಷ್ಟು ಜನರು ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.</p>.<p>ರಾಜ್ಯದ ಎಲ್ಲಾ 403 ವಿಧಾನಸಭಾ ಕ್ಷೇತ್ರಗಳ 3,571 ಜನರನ್ನು ಸಮೀಕ್ಷೆಗಾಗಿ ಸಂಪರ್ಕಿಸಲಾಗಿತ್ತು ಎಂದು ಸಮೀಕ್ಷಾ ಸಂಸ್ಥೆಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>