ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆ ರದ್ದಿಗೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದವರ ಮೇಲೆ ಕಾರು ಹರಿಸಿ ನಾಲ್ವರು ರೈತರನ್ನು ಹತ್ಯೆ ಮಾಡಿದ ಎಂಬ ಆರೋಪ ಆಶಿಶ್ ಮೇಲಿದೆ. ಪ್ರಕರಣ ಸಂಬಂಧ ಫೆಬ್ರುವರಿಯಲ್ಲಿ ಲಖನೌ ಪೀಠದ ಅಲಹಾಬಾದ್ ಹೈಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಬಳಿಕ ಸುಪ್ರೀಂಕೋರ್ಟ್ ಜಾಮೀನನ್ನು ರದ್ದು ಮಾಡಿತ್ತು.
ಕಳೆದ ವರ್ಷ ಅಕ್ಟೋಬರ್ನಲ್ಲಿ ನಡೆದ ಲಖಿಂಪುರ ಖೇರಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದರು.