ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಖಿಂಪುರ–ಖೇರಿ ಪ್ರಕರಣ: ಮತ್ತೆ ಇಬ್ಬರ ಬಂಧನ

Last Updated 3 ನವೆಂಬರ್ 2021, 16:29 IST
ಅಕ್ಷರ ಗಾತ್ರ

ಲಖಿಂಪುರ–ಖೇರಿ, ಉತ್ತರ ಪ್ರದೇಶ: ಲಖಿಂಪುರ– ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ಎಸ್‌ಐಟಿ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬುಧವಾರ ಬಂಧಿಸಿದ್ದಾರೆ.

ಬಂಧಿತರನ್ನು ರಂಜಿತ್‌ ಸಿಂಗ್‌ ಮತ್ತು ಅವತಾರ್‌ ಸಿಂಗ್‌ ಅಲಿಯಾಸ್‌ ನಿಕ್ಕು ಎಂದು ಗುರುತಿಸಲಾಗಿದೆ.

ಇವರ ವಿರುದ್ಧ ಜಿಲ್ಲೆಯ ಟಿಕೋನಿಯಾ ಪೊಲೀಸ್‌ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳಡಿ ಎರಡನೇ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಜಿಲ್ಲಾ ಅಪರಾಧ ವಿಭಾಗ ಪತ್ರಿಕಾ ಪ್ರಕಟಣೆಯೊಂದರಲ್ಲಿ ತಿಳಿಸಿದೆ.

ಸುಮಿತ್‌ ಜೈಸ್ವಾಲ್‌ ಎಂಬಾತ ಟಿಕೋನಿಯಾ ಠಾಣೆಯಲ್ಲಿ ದಾಖಲಿಸಿದ ಎರಡನೇ ಪ್ರಕರಣದಲ್ಲಿ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದೆ.

ರಂಜಿತ್‌ ಸಿಂಗ್‌ ಮತ್ತು ಅವತಾರ್‌ ಸಿಂಗ್‌ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಹಿರಿಯ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಎಸ್‌.ಪಿ. ಯಾದವ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT