<p><strong>ಕೊಚ್ಚಿ: </strong>ಸ್ಥಳೀಯ ಮೀನುಗಾರಿಕೆ ದೋಣಿಗಳಲ್ಲಿ ಸರ್ಕಾರಿ ಅಧಿಕಾರಿಗಳನ್ನು ನಿಯೋಜಿಸುವುದು ಸೇರಿದಂತೆ ಹಲವು ಹೊಸ ನಿರ್ಧಾರಗಳನ್ನು ಲಕ್ಷದ್ವೀಪ ಆಡಳಿತ ಕೈಗೊಂಡಿದೆ.</p>.<p>ಬೇಹುಗಾರಿಕೆ ಮಾಹಿತಿಯನ್ನು ಸಂಗ್ರಹಿಸಲು ದೋಣಿಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಮೇ 28ರಂದು ಲಕ್ಷದ್ವೀಪ ಆಡಳಿತದ ಪ್ರಧಾನ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕೈಗೊಳ್ಳಲಾಗಿತ್ತು.</p>.<p>ಸ್ಥಳೀಯ ಮೀನುಗಾರಿಕೆ ದೋಣಿಗಳು ಮತ್ತು ಹಡಗುಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಭದ್ರತಾ ಕ್ರಮಗಳನ್ನು ಬಲಪಡಿಸುವ ಬಗ್ಗೆಯೂ ಸಭೆಯಲ್ಲಿ ನಿರ್ಧರಿಸಲಾಗಿತ್ತು.</p>.<p>ದ್ವೀಪ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳುವ ಬಗ್ಗೆ ಹಲವು ಸೂಚನೆಗಳನ್ನು ನೀಡಲಾಗಿದೆ. ಬಳಸಿದ ಎಳನೀರು ಚಿಪ್ಪುಗಳು, ಗಿಡಗಳ ಎಲೆಗಳು, ತೆಂಗಿನಕಾಯಿ ನಾರು ಮುಂತಾದವುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದು ಜೂನ್ 4ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.</p>.<p>ಹೊಸ ಆದೇಶಗಳ ಬಗ್ಗೆ ಆಕ್ರೋಶ ವ್ಯಕ್ತಪಡಿರುವ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್, ತಕ್ಷಣವೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.</p>.<p>‘ದ್ವೀಪದಲ್ಲಿ ನೂರಾರು ದೋಣಿಗಳಿವೆ. ಈ ಎಲ್ಲ ದೋಣಿಗಳಿಗೆ ಅಧಿಕಾರಿಗಳನ್ನು ನಿಯೋಜಿಸಲಾಗುತ್ತದೆಯೇ? ಈಗಾಗಲೇ ಎಲ್ಲ ದ್ವೀಪಗಳಲ್ಲಿ ನೌಕಾಪಡೆ ಮತ್ತು ಕರಾವಳಿ ಪಡೆಯಿಂದ ನಿಗಾವಹಿಸುವ ವ್ಯವಸ್ಥೆ ಜಾರಿಯಲ್ಲಿದೆ. ಮೀನುಗಾರರಿಗೂ ಕರಾವಳಿ ಪಡೆ ತರಬೇತಿ ನೀಡಿದೆ. ಈ ರೀತಿಯ ಕಾನೂನುಗಳಿಗೆ ಅರ್ಥ ಇಲ್ಲ’ ಎಂದು ಅವರು ಹೇಳಿದ್ದಾರೆ.</p>.<p>ಕಾಂಗ್ರೆಸ್ ಸಹ ಹೊಸ ಕ್ರಮಗಳಿಗೆ ವಿರೋಧ ವ್ಯಕ್ತಪಡಿಸಿದೆ. ಸೋಮವಾರ ಕೊಚ್ಚಿಯಲ್ಲಿ ಧರಣಿ ನಡೆಸಲು ನಿರ್ಧರಿಸಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/government-fighting-for-blue-tick-be-self-reliant-for-vaccine-rahul-gandhi-836527.html" target="_blank">ಕೋವಿಡ್ ಬಿಟ್ಟು ಟ್ವಿಟರ್ ಬ್ಲೂಟಿಕ್ಗಾಗಿ ಹೋರಾಡುತ್ತಿರುವ ಕೇಂದ್ರ: ರಾಹುಲ್ ಗಾಂಧಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ: </strong>ಸ್ಥಳೀಯ ಮೀನುಗಾರಿಕೆ ದೋಣಿಗಳಲ್ಲಿ ಸರ್ಕಾರಿ ಅಧಿಕಾರಿಗಳನ್ನು ನಿಯೋಜಿಸುವುದು ಸೇರಿದಂತೆ ಹಲವು ಹೊಸ ನಿರ್ಧಾರಗಳನ್ನು ಲಕ್ಷದ್ವೀಪ ಆಡಳಿತ ಕೈಗೊಂಡಿದೆ.</p>.<p>ಬೇಹುಗಾರಿಕೆ ಮಾಹಿತಿಯನ್ನು ಸಂಗ್ರಹಿಸಲು ದೋಣಿಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಮೇ 28ರಂದು ಲಕ್ಷದ್ವೀಪ ಆಡಳಿತದ ಪ್ರಧಾನ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕೈಗೊಳ್ಳಲಾಗಿತ್ತು.</p>.<p>ಸ್ಥಳೀಯ ಮೀನುಗಾರಿಕೆ ದೋಣಿಗಳು ಮತ್ತು ಹಡಗುಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಭದ್ರತಾ ಕ್ರಮಗಳನ್ನು ಬಲಪಡಿಸುವ ಬಗ್ಗೆಯೂ ಸಭೆಯಲ್ಲಿ ನಿರ್ಧರಿಸಲಾಗಿತ್ತು.</p>.<p>ದ್ವೀಪ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳುವ ಬಗ್ಗೆ ಹಲವು ಸೂಚನೆಗಳನ್ನು ನೀಡಲಾಗಿದೆ. ಬಳಸಿದ ಎಳನೀರು ಚಿಪ್ಪುಗಳು, ಗಿಡಗಳ ಎಲೆಗಳು, ತೆಂಗಿನಕಾಯಿ ನಾರು ಮುಂತಾದವುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದು ಜೂನ್ 4ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.</p>.<p>ಹೊಸ ಆದೇಶಗಳ ಬಗ್ಗೆ ಆಕ್ರೋಶ ವ್ಯಕ್ತಪಡಿರುವ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್, ತಕ್ಷಣವೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.</p>.<p>‘ದ್ವೀಪದಲ್ಲಿ ನೂರಾರು ದೋಣಿಗಳಿವೆ. ಈ ಎಲ್ಲ ದೋಣಿಗಳಿಗೆ ಅಧಿಕಾರಿಗಳನ್ನು ನಿಯೋಜಿಸಲಾಗುತ್ತದೆಯೇ? ಈಗಾಗಲೇ ಎಲ್ಲ ದ್ವೀಪಗಳಲ್ಲಿ ನೌಕಾಪಡೆ ಮತ್ತು ಕರಾವಳಿ ಪಡೆಯಿಂದ ನಿಗಾವಹಿಸುವ ವ್ಯವಸ್ಥೆ ಜಾರಿಯಲ್ಲಿದೆ. ಮೀನುಗಾರರಿಗೂ ಕರಾವಳಿ ಪಡೆ ತರಬೇತಿ ನೀಡಿದೆ. ಈ ರೀತಿಯ ಕಾನೂನುಗಳಿಗೆ ಅರ್ಥ ಇಲ್ಲ’ ಎಂದು ಅವರು ಹೇಳಿದ್ದಾರೆ.</p>.<p>ಕಾಂಗ್ರೆಸ್ ಸಹ ಹೊಸ ಕ್ರಮಗಳಿಗೆ ವಿರೋಧ ವ್ಯಕ್ತಪಡಿಸಿದೆ. ಸೋಮವಾರ ಕೊಚ್ಚಿಯಲ್ಲಿ ಧರಣಿ ನಡೆಸಲು ನಿರ್ಧರಿಸಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/government-fighting-for-blue-tick-be-self-reliant-for-vaccine-rahul-gandhi-836527.html" target="_blank">ಕೋವಿಡ್ ಬಿಟ್ಟು ಟ್ವಿಟರ್ ಬ್ಲೂಟಿಕ್ಗಾಗಿ ಹೋರಾಡುತ್ತಿರುವ ಕೇಂದ್ರ: ರಾಹುಲ್ ಗಾಂಧಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>