ಆಡಳಿತಾಧಿಕಾರಿಯ ವಿವಿಧ ನಿರ್ಣಯಗಳ ವಿರುದ್ಧ ಕೇರಳ ಹೈಕೋರ್ಟ್ನಲ್ಲಿ 23 ಅರ್ಜಿಗಳು ಸಲ್ಲಿಕೆಯಾಗಿವೆ. ಕೋವಿಡ್ ಮಾರ್ಗಸೂಚಿಯ ಬದಲಾವಣೆ, ಮೀನುಗಾರರ ಗುಡಿಸಲು ತೆರವು, ಗೂಂಡಾ ಕಾಯ್ದೆ ಜಾರಿ ಮತ್ತಿತರ ನಿರ್ಣಯಗಳ ವಿರುದ್ಧ ಕೇರಳ ಹೈಕೋರ್ಟ್ನಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ.ಅವುಗಳ ವಿಚಾರಣೆ ಪ್ರಗತಿಯಲ್ಲಿ ಇದೆ. ಇಂತಹ ಸಂದರ್ಭದಲ್ಲೇ ಲಕ್ಷದ್ವೀಪವನ್ನು ಕೇರಳ ಹೈಕೋರ್ಟ್ ವ್ಯಾಪ್ತಿಯಿಂದ, ಕರ್ನಾಟಕ ಹೈಕೋರ್ಟ್ ವ್ಯಾಪ್ತಿಗೆ ಬದಲಾಯಿಸುವ ಪ್ರಸ್ತಾವವನ್ನು ಆಡಳಿತಾಧಿಕಾರಿ ಇರಿಸಿದ್ದಾರೆ.