ಕೊಚ್ಚಿ: ‘ಲಕ್ಷದ್ವೀಪದ ಜನವಸತಿ ಪ್ರದೇಶಗಳಲ್ಲಿ ತೆಂಗು– ತಾಳೆ ಗರಿಗಳು, ಎಳನೀರು ಚಿಪ್ಪುಗಳ ತ್ಯಾಜ್ಯ ಕಂಡು ಬಂದರೆ, ಸಂಬಂಧಿಸಿದ ಜಾಗದ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ‘ ಎಂದು ನಿಯಮ ಜಾರಿಗೆ ತರಲು ಹೊರಟಿರುವ ಅಲ್ಲಿನ ಆಡಳಿತ ಕ್ರಮವನ್ನು ವಿರೋಧಿಸಿ ದ್ವೀಪ ಸಮೂಹದ ನಾಗರಿಕರು ಸೋಮವಾರ ‘ತೆಂಗಿನ ಗರಿ, ತಾಳೆ ಗರಿ‘ ಹಿಡಿದು ಪ್ರತಿಭಟನೆ ನಡೆಸಿದರು.