ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭುಜದ ಗಾಯ: ಲಾಲು ಪ್ರಸಾದ್ ಐಸಿಯುಗೆ ದಾಖಲು

Last Updated 4 ಜುಲೈ 2022, 12:49 IST
ಅಕ್ಷರ ಗಾತ್ರ

ಪಟ್ನಾ: ಮನೆಯ ಮೆಟ್ಟಿಲಿನಿಂದ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರು ಸೋಮವಾರ ಅಸ್ವಸ್ಥಗೊಂಡಿದ್ದು, ಅವರನ್ನು ಇಲ್ಲಿನ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ.

‘ಭುಜದ ಗಾಯ, ಮೂತ್ರಪಿಂಡದ ಸಮಸ್ಯೆ ಸೇರಿ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಅಸ್ವಸ್ಥಗೊಂಡ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಲಾಲು ಅವರು ಮನೆಯ ಮೆಟ್ಟಿಲಿನಿಂದ ಭಾನುವಾರ ಬಿದ್ದಿದ್ದು, ಅವರ ಭುಜದ ಮೂಳೆ ಮುರಿತಕ್ಕೊಳಗಾಗಿತ್ತು’ ಎಂದೂ ಹೇಳಿವೆ.

ಮೇವು ಹಗರಣದ ಹಲವು ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿರುವ ಲಾಲು ಅವರು ಕೆಲವು ತಿಂಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಮೂತ್ರಪಿಂಡದ ಕಸಿಗಾಗಿ ಸಿಂಗಪುರಕ್ಕೆ ತೆರಳಲು ಜಾರ್ಖಂಡ್‌ ಹೈಕೋರ್ಟ್‌ನಿಂದ ಅವರು ಅನುಮತಿ ಪಡೆದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT