<p><strong>ನವದೆಹಲಿ</strong>: ಆರ್ಜೆಡಿ ಪಕ್ಷದ ಅಧ್ಯಕ್ಷ ಮತ್ತು ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರನ್ನು ಬುಧವಾರ ರಾತ್ರಿ ದೆಹಲಿ ಏಮ್ಸ್ಗೆ ಏರ್ಲಿಫ್ಟ್ ಮಾಡಲಾಗಿದೆ.</p>.<p>ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಲಾಲು ಅವರನ್ನು ದೆಹಲಿ ಏಮ್ಸ್ಗೆ ಕರೆದೊಯ್ಯಲು ವೈದ್ಯರು ಸೂಚಿಸಿದ್ದರು.</p>.<p>ಲಾಲು ಅವರ ಜತೆ ವೈದ್ಯರ ತಂಡ ಮತ್ತು ಹಿರಿಯ ಪುತ್ರಿ ಮಿಸಾ ಭಾರ್ತಿ ಕೂಡ ದೆಹಲಿಗೆ ತೆರಳಿದ್ದಾರೆ.</p>.<p>ಲಾಲು ಅವರ ಪತ್ನಿ ರಾಬ್ಡಿ ದೇವಿ ಮತ್ತು ಕಿರಿಯ ಪುತ್ರ ತೇಜಸ್ವಿ ಯಾದವ್ ದೆಹಲಿಗೆ ಮುಂಚಿತವಾಗಿ ತೆರಳಿ, ಆಸ್ಪತ್ರೆಯಲ್ಲಿನ ದಾಖಲಾತಿ ಮತ್ತಿತರ ಕೆಲಸಗಳನ್ನು ನೋಡಿಕೊಂಡರು.</p>.<p>ಸೋಮವಾರ ಮನೆಯಲ್ಲಿ ಜಾರಿ ಬಿದ್ದಿದ್ದ ಲಾಲು ಅವರ ಭುಜದ ಮೂಳೆ ಮುರಿದಿದ್ದು, ದೇಹದ ಮತ್ತೆರಡು ಕಡೆಗಳಲ್ಲಿ ಗಾಯಗಳಾಗಿವೆ. ಹೀಗಾಗಿ ನಡೆದಾಡಲು ಸಾಧ್ಯವಾಗುತ್ತಿಲ್ಲ.</p>.<p>ಬುಧವಾರ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಪಾಟ್ನಾದ ಆಸ್ಪತ್ರೆಗೆ ಭೇಟಿ ನೀಡಿ ಲಾಲು ಅವರ ಆರೋಗ್ಯ ವಿಚಾರಿಸಿದ್ದರು. ನಂತರ ದೆಹಲಿಗೆ ಕರೆದೊಯ್ಯಲು ಸೂಚಿಸಿದ್ದರು.</p>.<p><a href="https://www.prajavani.net/india-news/dgca-notice-to-spice-jet-for-technical-problem-952126.html" itemprop="url">ವಿಮಾನಗಳಲ್ಲಿ ತಾಂತ್ರಿಕ ದೋಷ: ಸ್ಪೈಸ್ಜೆಟ್ಗೆ ಡಿಜಿಸಿಎ ನೋಟಿಸ್ </a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆರ್ಜೆಡಿ ಪಕ್ಷದ ಅಧ್ಯಕ್ಷ ಮತ್ತು ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರನ್ನು ಬುಧವಾರ ರಾತ್ರಿ ದೆಹಲಿ ಏಮ್ಸ್ಗೆ ಏರ್ಲಿಫ್ಟ್ ಮಾಡಲಾಗಿದೆ.</p>.<p>ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಲಾಲು ಅವರನ್ನು ದೆಹಲಿ ಏಮ್ಸ್ಗೆ ಕರೆದೊಯ್ಯಲು ವೈದ್ಯರು ಸೂಚಿಸಿದ್ದರು.</p>.<p>ಲಾಲು ಅವರ ಜತೆ ವೈದ್ಯರ ತಂಡ ಮತ್ತು ಹಿರಿಯ ಪುತ್ರಿ ಮಿಸಾ ಭಾರ್ತಿ ಕೂಡ ದೆಹಲಿಗೆ ತೆರಳಿದ್ದಾರೆ.</p>.<p>ಲಾಲು ಅವರ ಪತ್ನಿ ರಾಬ್ಡಿ ದೇವಿ ಮತ್ತು ಕಿರಿಯ ಪುತ್ರ ತೇಜಸ್ವಿ ಯಾದವ್ ದೆಹಲಿಗೆ ಮುಂಚಿತವಾಗಿ ತೆರಳಿ, ಆಸ್ಪತ್ರೆಯಲ್ಲಿನ ದಾಖಲಾತಿ ಮತ್ತಿತರ ಕೆಲಸಗಳನ್ನು ನೋಡಿಕೊಂಡರು.</p>.<p>ಸೋಮವಾರ ಮನೆಯಲ್ಲಿ ಜಾರಿ ಬಿದ್ದಿದ್ದ ಲಾಲು ಅವರ ಭುಜದ ಮೂಳೆ ಮುರಿದಿದ್ದು, ದೇಹದ ಮತ್ತೆರಡು ಕಡೆಗಳಲ್ಲಿ ಗಾಯಗಳಾಗಿವೆ. ಹೀಗಾಗಿ ನಡೆದಾಡಲು ಸಾಧ್ಯವಾಗುತ್ತಿಲ್ಲ.</p>.<p>ಬುಧವಾರ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಪಾಟ್ನಾದ ಆಸ್ಪತ್ರೆಗೆ ಭೇಟಿ ನೀಡಿ ಲಾಲು ಅವರ ಆರೋಗ್ಯ ವಿಚಾರಿಸಿದ್ದರು. ನಂತರ ದೆಹಲಿಗೆ ಕರೆದೊಯ್ಯಲು ಸೂಚಿಸಿದ್ದರು.</p>.<p><a href="https://www.prajavani.net/india-news/dgca-notice-to-spice-jet-for-technical-problem-952126.html" itemprop="url">ವಿಮಾನಗಳಲ್ಲಿ ತಾಂತ್ರಿಕ ದೋಷ: ಸ್ಪೈಸ್ಜೆಟ್ಗೆ ಡಿಜಿಸಿಎ ನೋಟಿಸ್ </a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>