ಈ ಎರಡೂ ಘಟನೆಗಳ ಬಗ್ಗೆ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದೆ. ‘ತೇಜ್ ಪ್ರತಾಪ್ ಯಾವಾಗಲೂ ತಪ್ಪು ಕಾರಣಗಳಿಂದಾಗಿ ಸುದ್ದಿಯಲ್ಲಿರುತ್ತಾರೆ. ಈಗ, ಒಬ್ಬ ಸಚಿವರಾಗಿ ತೇಜ್ ಪ್ರತಾಪ್ ಅವರು ತಮ್ಮ ಎಲ್ಲ ಕರ್ತವ್ಯಗಳನ್ನು ತಮ್ಮ ಭಾವನಿಗೆ ಹೊರಗುತ್ತಿಗೆ ನೀಡಿದ್ದಾರೆಂದು ಕಾಣುತ್ತದೆ’ ಎಂದು ಬಿಜೆಪಿಯ ಹಿರಿಯ ನಾಯಕ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ.