<p class="title"><strong>ರಾಂಚಿ: </strong>ಜೈಲಿನಲ್ಲಿರುವ ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಜಾಮೀನಿಗೆ ಸಂಬಂಧಪಟ್ಟ ಅರ್ಜಿಯ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಒಂದು ವಾರ ಕಾಲ ಮುಂದೂಡಿದೆ.</p>.<p class="title">ಈ ಕುರಿತು ಸಿಬಿಐ ತನ್ನ ಉತ್ತರವನ್ನು ಸಲ್ಲಿಸಲು ನ್ಯಾಯಾಲಯಕ್ಕೆ ಸಮಯ ಕೋರಿರುವುದರಿಂದ ಡುಮ್ಕಾ ಖಜಾನೆ ಪ್ರಕರಣದಲ್ಲಿನ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ಅವರು ಏ.16ಕ್ಕೆ ಮುಂದೂಡಿದರು.</p>.<p class="title">ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಿ ತಮ್ಮ ವಾದ ಮಂಡಿಸಿದ ಲಾಲು ಪ್ರಸಾದ್ ಪರ ವಕೀಲರಾದ ಕಪಿಲ್ ಸಿಬಲ್ ಅವರು, ‘ರಾಜಕೀಯ ಕಾರಣಗಳಿಗಾಗಿ ನನ್ನ ಕಕ್ಷಿದಾರರನ್ನು ಜೈಲಿನಲ್ಲಿ ಇರಿಸಿಕೊಳ್ಳುವ ಸಲುವಾಗಿ ಸಿಬಿಐ ಉದ್ದೇಶಪೂರ್ವಕವಾಗಿ ಈ ವಿಷಯದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ’ ಎಂದು ಪ್ರತಿಪಾದಿಸಿದರು.</p>.<p class="bodytext">ಹೆಚ್ಚಿನ ಸಮಯ ಕೋರಿ ಸಿಬಿಐ ಪರ ವಕೀಲರು ಮಂಡಿಸಿದ ಮನವಿಯನ್ನು ಅಂಗೀಕರಿಸಿದ ನ್ಯಾಯಾಲಯವು, ಮುಂದಿನ ಮೂರು ದಿನಗಳಲ್ಲಿ ಈ ವಿಷಯದ ಬಗ್ಗೆ ತನಗೆ ಅಫಿಡವಿಟ್ ಸಲ್ಲಿಸಬೇಕೆಂದು ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ರಾಂಚಿ: </strong>ಜೈಲಿನಲ್ಲಿರುವ ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಜಾಮೀನಿಗೆ ಸಂಬಂಧಪಟ್ಟ ಅರ್ಜಿಯ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಒಂದು ವಾರ ಕಾಲ ಮುಂದೂಡಿದೆ.</p>.<p class="title">ಈ ಕುರಿತು ಸಿಬಿಐ ತನ್ನ ಉತ್ತರವನ್ನು ಸಲ್ಲಿಸಲು ನ್ಯಾಯಾಲಯಕ್ಕೆ ಸಮಯ ಕೋರಿರುವುದರಿಂದ ಡುಮ್ಕಾ ಖಜಾನೆ ಪ್ರಕರಣದಲ್ಲಿನ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ಅವರು ಏ.16ಕ್ಕೆ ಮುಂದೂಡಿದರು.</p>.<p class="title">ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಿ ತಮ್ಮ ವಾದ ಮಂಡಿಸಿದ ಲಾಲು ಪ್ರಸಾದ್ ಪರ ವಕೀಲರಾದ ಕಪಿಲ್ ಸಿಬಲ್ ಅವರು, ‘ರಾಜಕೀಯ ಕಾರಣಗಳಿಗಾಗಿ ನನ್ನ ಕಕ್ಷಿದಾರರನ್ನು ಜೈಲಿನಲ್ಲಿ ಇರಿಸಿಕೊಳ್ಳುವ ಸಲುವಾಗಿ ಸಿಬಿಐ ಉದ್ದೇಶಪೂರ್ವಕವಾಗಿ ಈ ವಿಷಯದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ’ ಎಂದು ಪ್ರತಿಪಾದಿಸಿದರು.</p>.<p class="bodytext">ಹೆಚ್ಚಿನ ಸಮಯ ಕೋರಿ ಸಿಬಿಐ ಪರ ವಕೀಲರು ಮಂಡಿಸಿದ ಮನವಿಯನ್ನು ಅಂಗೀಕರಿಸಿದ ನ್ಯಾಯಾಲಯವು, ಮುಂದಿನ ಮೂರು ದಿನಗಳಲ್ಲಿ ಈ ವಿಷಯದ ಬಗ್ಗೆ ತನಗೆ ಅಫಿಡವಿಟ್ ಸಲ್ಲಿಸಬೇಕೆಂದು ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>