ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ: ಭೂಕುಸಿತ, ಮಣ್ಣಿನಡಿ ಸಿಲುಕಿದವರಿಗಾಗಿ ಹುಡುಕಾಟ

Last Updated 3 ಆಗಸ್ಟ್ 2021, 5:09 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ಸೊಲಾನ್ ಜಿಲ್ಲೆಯ ಪಟ್ಟಣವೊಂದರ ಹೋಟೆಲ್‌ ಸಮೀಪ ಮಂಗಳವಾರ ಮುಂಜಾನೆ ಭೂಕುಸಿತ ಸಂಭವಿಸಿದ್ದು, ಮೂವರು ವ್ಯಕ್ತಿಗಳು ಮಣ್ಣಿನಡಿ ಸಿಲುಕಿದ್ದಾರೆ.

ಈ ಪೈಕಿ ಒಬ್ಬನನ್ನು ರಕ್ಷಿಸಲಾಗಿದೆ. ಇನ್ನಿಬ್ಬರಿಗಾಗಿ ಶೋಧಕಾರ್ಯ ಮುಂದುವರಿದಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿ ತಿಳಿಸಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸರು ಘಟನಾ ಸ್ಥಳದಲ್ಲಿದ್ದಾರೆ.

ಸೊಲಾನ್ ಜಿಲ್ಲೆಯ ಕಸೌಲಿ ಉಪ ವಲಯದ ಪರ್ವಾನೂ ಪಟ್ಟಣದಸೆಕ್ಟರ್ 3 ನಲ್ಲಿರುವ ಹೋಟೆಲ್‌ ಸಮೀಪದಲ್ಲಿ ಮುಂಜಾನೆ 2.30ರ ವೇಳೆಯಲ್ಲಿ ಭೂಕುಸಿತ ಸಂಭವಿಸಿದೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT