ಕೊಲಂಬೊ: ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಮಾತುಕತೆಗೆ ಆಹ್ವಾನಿಸಿರುವ ಹಿನ್ನೆಲೆಯಲ್ಲಿ ಪಕ್ಷದೊಳಗೆ ಚರ್ಚೆ ನಡೆಸಿದ ಶ್ರೀಲಂಕಾದ ತಮಿಳು ಅಲ್ಪಸಂಖ್ಯಾತ ಪಕ್ಷಗಳು, ಸಂಯುಕ್ತ ವ್ಯವಸ್ಥೆಗೆ ಒತ್ತು ಸೇರಿದಂತೆ ಮೂರು ಅಂಶಗಳ ಸೂತ್ರ ಮುಂದಿಡಲು ಒಪ್ಪಿಕೊಂಡಿವೆ ಎಂದು ತಮಿಳು ರಾಷ್ಟ್ರೀಯ ಮೈತ್ರಿಕೂಟದ (ಟಿಎನ್ಎ) ಮೂಲಗಳು ಶನಿವಾರ ತಿಳಿಸಿವೆ.