ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಪ್ರವೇಶದ ವದಂತಿ ತಳ್ಳಿ ಹಾಕಿದ ಸಿಧು ಮೂಸೆವಾಲಾ ತಂದೆ

ಅಕ್ಷರ ಗಾತ್ರ

ಚಂಡೀಗಡ: ಇತ್ತೀಚೆಗೆ ಹತ್ಯೆಯಾದಕಾಂಗ್ರೆಸ್ ಮುಖಂಡ ಮತ್ತು ಪಂಜಾಬ್ ಗಾಯಕ ಸಿಧು ಮೂಸೆವಾಲಾ ಅವರ ತಂದೆ ಬಲ್‌ಕೌರ್‌ ಸಿಂಗ್ ಅವರು ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದನ್ನು ಅಲ್ಲಗಳೆದಿರುವ ಸಿಂಗ್‌, 'ಅಂತಹ ಯಾವುದೇ ಉದ್ದೇಶ ಇಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ತಾವು ಮಾತನಾಡಿರುವ 55 ಸೆಕೆಂಡ್‌ಗಳ ವಿಡಿಯೊವನ್ನು ಮೂಸೆವಾಲಾ ಅವರ ಯುಟ್ಯೂಬ್‌ ಚಾನಲ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವದಂತಿಗಳ ಬಗ್ಗೆ ಯಾರೊಬ್ಬರೂ ತಲೆಕೆಡಿಸಿಕೊಳ್ಳಬಾರದು ಎಂದು ಕೈಮುಗಿದು ವಿನಂತಿಸಿದ್ದಾರೆ.

'ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಬಗ್ಗೆ ಬೇಸರವಾಗಿದೆ. ಸಾಕಷ್ಟು ವದಂತಿಗಳಿವೆ. ಅವುಗಳನ್ನು ನಂಬಬೇಡಿ. ಇತ್ತೀಚೆಗೆ ಮಗನನ್ನು ಕಳೆದುಕೊಂಡಿದ್ದೇನೆ. ಚುನಾವಣೆಗೆ ಸ್ಪರ್ಧಿಸುವ ಯಾವ ಉದ್ದೇಶವನ್ನೂ ನಾನು ಹೊಂದಿಲ್ಲ' ಎಂದು ಪಂಜಾಬಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:

'ಜೂನ್‌ 8ರಂದು ಪ್ರಾರ್ಥನಾ ಸಭೆ ಇದೆ. ಆಗ ನಿಮ್ಮ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ. ಈಗ ಮಾತನಾಡುವ ಸ್ಥಿತಿಯಲ್ಲಿ ನಾನಿಲ್ಲ' ಎಂದೂ ಹೇಳಿದ್ದಾರೆ.

ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಚಂಡೀಗಡದಲ್ಲಿ ಶನಿವಾರ ಮೂಸೆವಾಲಾ ಅವರ ಕುಟುಂಬಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಮೇ 29ರಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದುಷ್ಕರ್ಮಿಗಳು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT