<p class="title"><strong>ಮುಂಬೈ:</strong> ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಿರುದ್ಧ ‘ಸುಳ್ಳು ಹಾಗೂ ಮಾನಹಾನಿಕರ’ ಟೀಕೆ ಮಾಡಿದ ಆರೋಪದ ಮೇಲೆನಗರದ ವಕೀಲರೊಬ್ಬರು ಗೀತ ರಚನೆಕಾರ ಜಾವೇದ್ ಅಖ್ತರ್ ಅವರಿಗೆ ಬುಧವಾರ ನೋಟಿಸ್ವೊಂದನ್ನು ಕಳುಹಿಸಿದ್ದಾರೆ.</p>.<p class="title">ಇತ್ತೀಚಿನ ಸಂದರ್ಶನವೊಂದರಲ್ಲಿ ಜಾವೇದ್ ಅವರು ಆರ್ಎಸ್ಎಸ್ ಅನ್ನು ಟೀಕಿಸಿದ್ದರು. ಬಳಿಕ ಈ ಬಗ್ಗೆ ಕ್ಷಮೆಯಾಚಿಸಿದ್ದರು. </p>.<p class="bodytext">ಅಖ್ತರ್ ಅವರು ಬೇಷರತ್ತಾಗಿ ಲಿಖಿತ ರೂಪದಲ್ಲಿ ಕ್ಷಮೆಯಾಚಿಸಬೇಕು. ಇದರಲ್ಲಿ ಅವರು ವಿಫಲರಾದರೆ ಅಖ್ತರ್ ವಿರುದ್ಧ ₹ 100 ಕೋಟಿ ಮಾನನಷ್ಟದ ಅಪರಾಧ ಪ್ರಕರಣವನ್ನು ಹೂಡುವುದಾಗಿ ವಕೀಲ ಸಂತೋಷ್ ದುಬೆ ಹೇಳಿದ್ದಾರೆ.</p>.<p class="bodytext">ಅಖ್ತರ್ ಅವರು ನೋಟಿಸ್ ಸ್ವೀಕರಿಸಿದ ಏಳು ದಿನಗಳ ಒಳಗೆ ತಮ್ಮ ಎಲ್ಲಾ ಹೇಳಿಕೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.</p>.<p class="bodytext">ಇತ್ತೀಚಿನ ಖಾಸಗಿ ಸುದ್ದಿ ವಾಹಿನಿಯ ಸಂದರ್ಶನದಲ್ಲಿ ಜಾವೇದ್ ಅಖ್ತರ್ (76) ತಾಲಿಬಾನ್ ಮತ್ತು ಆರ್ಎಸ್ಎಸ್ ನಡುವೆ ಸಾಮ್ಯತೆ ಇದೆ ಎಂದಿದ್ದರು.</p>.<p class="bodytext">ಅವರ ಈ ಹೇಳಿಕೆಗಳನ್ನು ಉಲ್ಲೇಖಿಸಿರುವ ವಕೀಲ ಸಂತೋಷ್, ಅಖ್ತರ್ ಅವರು ಐಪಿಸಿ ಸೆಕ್ಷನ್ 499 (ಮಾನನಷ್ಟ) ಮತ್ತು 500 (ಮಾನನಷ್ಟಕ್ಕೆ ಶಿಕ್ಷೆ) ಅಡಿಯಲ್ಲಿ ಅಪರಾಧ ಮಾಡಿದ್ದಾರೆ ಎಂದು ನೋಟಿಸ್ನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ:</strong> ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಿರುದ್ಧ ‘ಸುಳ್ಳು ಹಾಗೂ ಮಾನಹಾನಿಕರ’ ಟೀಕೆ ಮಾಡಿದ ಆರೋಪದ ಮೇಲೆನಗರದ ವಕೀಲರೊಬ್ಬರು ಗೀತ ರಚನೆಕಾರ ಜಾವೇದ್ ಅಖ್ತರ್ ಅವರಿಗೆ ಬುಧವಾರ ನೋಟಿಸ್ವೊಂದನ್ನು ಕಳುಹಿಸಿದ್ದಾರೆ.</p>.<p class="title">ಇತ್ತೀಚಿನ ಸಂದರ್ಶನವೊಂದರಲ್ಲಿ ಜಾವೇದ್ ಅವರು ಆರ್ಎಸ್ಎಸ್ ಅನ್ನು ಟೀಕಿಸಿದ್ದರು. ಬಳಿಕ ಈ ಬಗ್ಗೆ ಕ್ಷಮೆಯಾಚಿಸಿದ್ದರು. </p>.<p class="bodytext">ಅಖ್ತರ್ ಅವರು ಬೇಷರತ್ತಾಗಿ ಲಿಖಿತ ರೂಪದಲ್ಲಿ ಕ್ಷಮೆಯಾಚಿಸಬೇಕು. ಇದರಲ್ಲಿ ಅವರು ವಿಫಲರಾದರೆ ಅಖ್ತರ್ ವಿರುದ್ಧ ₹ 100 ಕೋಟಿ ಮಾನನಷ್ಟದ ಅಪರಾಧ ಪ್ರಕರಣವನ್ನು ಹೂಡುವುದಾಗಿ ವಕೀಲ ಸಂತೋಷ್ ದುಬೆ ಹೇಳಿದ್ದಾರೆ.</p>.<p class="bodytext">ಅಖ್ತರ್ ಅವರು ನೋಟಿಸ್ ಸ್ವೀಕರಿಸಿದ ಏಳು ದಿನಗಳ ಒಳಗೆ ತಮ್ಮ ಎಲ್ಲಾ ಹೇಳಿಕೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.</p>.<p class="bodytext">ಇತ್ತೀಚಿನ ಖಾಸಗಿ ಸುದ್ದಿ ವಾಹಿನಿಯ ಸಂದರ್ಶನದಲ್ಲಿ ಜಾವೇದ್ ಅಖ್ತರ್ (76) ತಾಲಿಬಾನ್ ಮತ್ತು ಆರ್ಎಸ್ಎಸ್ ನಡುವೆ ಸಾಮ್ಯತೆ ಇದೆ ಎಂದಿದ್ದರು.</p>.<p class="bodytext">ಅವರ ಈ ಹೇಳಿಕೆಗಳನ್ನು ಉಲ್ಲೇಖಿಸಿರುವ ವಕೀಲ ಸಂತೋಷ್, ಅಖ್ತರ್ ಅವರು ಐಪಿಸಿ ಸೆಕ್ಷನ್ 499 (ಮಾನನಷ್ಟ) ಮತ್ತು 500 (ಮಾನನಷ್ಟಕ್ಕೆ ಶಿಕ್ಷೆ) ಅಡಿಯಲ್ಲಿ ಅಪರಾಧ ಮಾಡಿದ್ದಾರೆ ಎಂದು ನೋಟಿಸ್ನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>